ADVERTISEMENT

ರಸ್ತೆ ಅಪಘಾತ: ಗಾಯಗೊಂಡಿದ್ದ ಯೋಧ ಚಿಕಿತ್ಸೆಗೆ ಸ್ಪಂದಿಸದೆ ಸಾವು

​ಪ್ರಜಾವಾಣಿ ವಾರ್ತೆ
Published 4 ಮೇ 2022, 15:45 IST
Last Updated 4 ಮೇ 2022, 15:45 IST
ಸಂಜಯ್
ಸಂಜಯ್   

ಹಾಸನ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ದಾಸರಕೊಪ್ಪಲು ಗ್ರಾಮದ ಯೋಧ ಸಂಜಯ್ (22) ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾರೆ.

ಕಾಶ್ಮೀರದಲ್ಲಿ ರಾಷ್ಟ್ರೀಯ ರೈಫಲ್ಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಜಯ್,ರಜೆಯ ಮೇಲೆ ತವರಿಗೆ ಬಂದಿದ್ದರು. ಮೂರು ದಿನಗಳ ಹಿಂದೆ ಹಾಸನದ ಎಂ.ಜಿ ರಸ್ತೆಯಲ್ಲಿ ಬೈಕ್‍ನಲ್ಲಿ ಹೋಗುತ್ತಿದ್ದಾಗ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಬೆಂಗಳೂರಿನ ಕಮಾಂಡೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ದೇಶ ಸೇವೆ ಮಾಡಬೇಕು ಎಂಬ ಮಹದಾಸೆಯಿಂದ ಭಾರತೀಯ ಸೇನೆ ಸೇರಿದ್ದ ಸಂಜಯ್, ಇತ್ತೀಚೆಗಷ್ಟೇ ಬಡ್ತಿ ಪಡೆದಿದ್ದರು. ಯೋಧನ ಅಗಲಿಕೆಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ADVERTISEMENT

ಪಾರ್ಥಿವ ಶರೀರ ನಗರಕ್ಕೆ ಬರುತ್ತಿದ್ದಂತೆಯೇ ನೂರಾರು ಮಂದಿ ಯೋಧನ ಅಂತಿಮ ದರ್ಶನ ಪಡೆದರು. ಸಂಜೆ ಸ್ವಗ್ರಾಮ ಹೊನ್ನೆನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.