ಸಕಲೇಶಪುರ: ಇಲ್ಲಿಯ ಪುರಸಭೆ ವಾರ್ಡ್ ನಂ.7ಕ್ಕೆ ಡಿ. 27ಕ್ಕೆ ನಡೆಯುವ ಉಪ ಚುನಾವಣೆಗೆ ಶುಕ್ರವಾರ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು.
ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಅಭ್ಯರ್ಥಿ ಅರುಣಾ ಭಾರ್ಗವಿ ಚುನಾವಣಾ ಅಧಿಕಾರಿ ಡಾ. ಆನಂದಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿ.ಪಂ. ಮಾಜಿ ಸದಸ್ಯರಾದ ಚಂಚಲ ಕುಮಾರಸ್ವಾಮಿ, ಸುಪ್ರದೀಪ್ತ ಯಜಮಾನ್, ಪುರಸಭಾ ಮಾಜಿ ಅಧ್ಯಕ್ಷ ಕಾಡಪ್ಪ, ಎಸ್.ಡಿ. ಆದರ್ಶ, ಯುವ ಜನತಾದಳ ಅಧ್ಯಕ್ಷ ಸ.ಬ. ಭಾಸ್ಕರ್ ಇದ್ದರು.
ಕಾಂಗ್ರೆಸ್ ಅಭ್ಯರ್ಥಿ: ಕಾಂಗ್ರೆಸ್ ಅಭ್ಯರ್ಥಿಯಾಗಿ ರೇಶ್ಮಾ ನಾಮಪತ್ರ ಸಲ್ಲಿಸಿದರು. ಪಕ್ಷದ ತಾಲ್ಲೂಕು ಅಧ್ಯಕ್ಷ ಬೈರಮುಡಿ ಚಂದ್ರಣ್ಣ, ಪಕ್ಷದ ಮುಖಂಡರಾದ ಮುರುಳಿ ಮೋಹನ್, ಕೆಪಿಸಿಸಿ ಸದಸ್ಯ ಯಡೇಹಳ್ಳಿ ಆರ್. ಮಂಜುನಾಥ್, ಸೈಯದ್ ಮುಫೀಜ್, ಅಣ್ಣಪ್ಪ ಇದ್ದರು.
ಬಿಜೆಪಿ ಅಭ್ಯರ್ಥಿ: ಬಿಜೆಪಿ ಅಭ್ಯರ್ಥಿಯಾಗಿ ಇಂದುಮತಿ ಆನಂದ್ ನಾಮಪತ್ರ ಸಲ್ಲಿಸಿದರು. ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ್ ಸಂಘಿ, ಕಾರ್ಯದರ್ಶಿ ಸಂದೇಶ್, ಪಕ್ಷದ ಮುಖಂಡರಾದ ಪ್ರತಿಭಾ ಸಿಮೆಂಟ್ ಮಂಜು, ಬಾಲರಾಜ್, ಲೋಕೇಶ್ ಜಾನೇಕೆರೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.