ADVERTISEMENT

ಶಿರಾಡಿ ಘಾಟ್‌: ವಾಹನ ಸಂಚಾರ ನಿರ್ಬಂಧ

ಭೂ ಕುಸಿತ

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 13:40 IST
Last Updated 23 ಜುಲೈ 2021, 13:40 IST

ಹಾಸನ: ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ಮಾರನಹಳ್ಳಿಯಿಂದದೋಣಿಗಾಲ್‍ವರೆಗಿನ ರಸ್ತೆಯಲ್ಲಿ ಮುಂದಿನ ಆದೇಶದವರೆಗೆ ಎಲ್ಲಾ ರೀತಿಯವಾಹನಗಳ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಕಾರುಗಳು, ಜೀಪು, ಟೆಂಪೋ, ಮಿನಿ ವ್ಯಾನ್, ದ್ವಿಚಕ್ರ ವಾಹನಗಳು, ಆಂಬುಲೆನ್ಸ್, ಸಾರ್ವಜನಿಕರು ಸಂಚರಿಸುವ ಬಸ್‍ಗಳು, ಆರು ಚಕ್ರದ ಸರಕು ಸಾಗಣೆಯ (ಗುಂಪು ಎ) ಲಘು ವಾಹನಗಳು ಹಾಸನ, ಬೇಲೂರು, ಮೂಡಿಗೆರೆ, ಚಾರ್ಮಾಡಿ ಘಾಟ್ ಮಾರ್ಗದ ಮೂಲಕ ಮಂಗಳೂರು ತಲುಪುಬಹುದು.

ರಾಜಹಂಸ, ಐರಾವತ, ಬುಲೆಟ್ ಟ್ಯಾಂಕರ್ ಶಿಫ್ಟ್ ಕಾಗ್ರೋ, ಕಂಟೈನರ್ಸ್, ಮಲ್ಟಿ ಎಕ್ಸೆಲ್ ಟ್ರಕ್ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಣೆ (ಗುಂಪು ಬಿ) ವಾಹನಗಳುಹಾಸನ- ಅರಕಲಗೂಡು-ಕುಶಾಲನಗರ-ಸಂಪಾಜೆ ಮಾರ್ಗದ ಮೂಲಕ ಮಂಗಳೂರುತಲುಪಲು ವ್ಯವಸ್ಥೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.