ADVERTISEMENT

ಹಾಸನ: ಶಿರಾಡಿ ರಸ್ತೆ ಲಘು ವಾಹನಗಳಿಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2021, 12:21 IST
Last Updated 16 ಆಗಸ್ಟ್ 2021, 12:21 IST

ಹಾಸನ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ ರಸ್ತೆಯಲ್ಲಿ ಹಗಲು ವೇಳೆ ಕಾರು, ಜೀಪು, ಟೆಂಪೋ, ದ್ವಿಚಕ್ರ ವಾಹನ, ಸಾರಿಗೆ ಬಸ್‌, ಆಂಬುಲೆನ್ಸ್‌, 20 ಟನ್‌ಸಾಮರ್ಥ್ಯದಲಾರಿಗಳ ಸಂಚಾರಕ್ಕೆ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅನುಮತಿ ನೀಡಿದ್ದಾರೆ. ಟ್ಯಾಂಕರ್‌, ಕಾರ್ಗೋ ಕಂಟೇನರ್‌ ಸೇರಿದಂತೆ ಭಾರಿ ಗಾತ್ರದ ವಾಹನಗಳ ಸಂಚಾರನಿಷೇಧಿಸಲಾಗಿದೆ.

ಜುಲೈ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಗೆ ದೋಣಿಗಾಲ್‌ ಬಳಿ ಭೂ ಕುಸಿತ ಉಂಟಾಗಿ, ಶಿರಾಡಿ ಘಾಟ್‌ ರಸ್ತೆಯನ್ನು ಸಂಚಾರ ಬಂದ್‌ ಮಾಡಲಾಗಿತ್ತು. ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT