ADVERTISEMENT

ಸಿದ್ಧರಾಮೇಶ್ವರ ಭೋವಿ ಸಮುದಾಯ ಭವನ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2026, 6:23 IST
Last Updated 9 ಫೆಬ್ರುವರಿ 2026, 6:23 IST
ಬೇಲೂರು  ಸಮೀಪದ ಸೋಂಪುರ ಗ್ರಾಮದಲ್ಲಿ  ಸಿದ್ಧರಾಮೇಶ್ವರ ಭೋವಿ ಸಮುದಾಯ ಭವನದ  ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು. 
ಬೇಲೂರು  ಸಮೀಪದ ಸೋಂಪುರ ಗ್ರಾಮದಲ್ಲಿ  ಸಿದ್ಧರಾಮೇಶ್ವರ ಭೋವಿ ಸಮುದಾಯ ಭವನದ  ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು.    

ಬೇಲೂರು: ಪಟ್ಟಣ ಸಮೀಪದ ಸೋಂಪುರ ಗ್ರಾಮದಲ್ಲಿ ಸಿದ್ಧರಾಮೇಶ್ವರ ಭೋವಿ ಸಮುದಾಯ ಭವನದ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿ ಪೂಜೆ ನೆರವೇರಿಸಿದರು.

 ಶಾಸಕ ಎಚ್.ಕೆ.ಸುರೇಶ್ ಮಾತನಾಡಿ, 'ಭೋವಿ ಸಮುದಾಯಕ್ಕೆ ಸಮುದಾಯ ಭವನಕ್ಕೆ ಜಾಗವನ್ನು ಗುರುತಿಸಿ, ಸರ್ಕಾರದಿಂದ  ₹1 ಕೋಟಿ , ಅನುದಾನದಲ್ಲಿ ಕೆಲಸ ಮಾಡಿಸಲು ಭೂಮಿ ಪೂಜೆ ನೆರವೇರಿಸಲಾಗುತ್ತಿದೆ. ಭೋವಿ ಸಮಾಜಕ್ಕೆ ಹೆಚ್ಚಿನ ಕೆಲಸಗಳನ್ನು ಮಾಡಿಸಲಾಗುವುದು.  ಇದೇ ಸರ್ಕಾರಿ ಜಾಗದಲ್ಲಿ ಕೃಷಿ ಮಾಡುತ್ತಿರುವ ಜನರಿಗೂ ಬೇರೆಡೆ ಸ್ಥಳವನ್ನು ಕಲ್ಪಿಸಲಾಗುವುದು ಎಂದರು.

ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ರಂಗನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ್ ಮಾತನಾಡಿದರು. ತಹಶೀಲ್ದಾರ್ ಶ್ರೀಧರ್ ಕಂಕಣವಾಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ, ಲೋಕೋಪಯೋಗಿ ಇಲಾಖೆ ಎಇಇ ಕೃಷ್ಣೇಗೌಡ, ಭೋವಿ ಸಮಾಜದ ಮುಖಂಡರಾದ ಮಹೇಶ್, ರಮೇಶ್, ರಾಮಾಭೋವಿ, ದೇವರಾಜು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.