ಹಳೇಬೀಡು: ‘ಆಧುನಿಕತೆಗೆ ತಕ್ಕಂತೆ ಮಕ್ಕಳಿಗೆ ಪಾಠಹೇಳಲು ಶಾಲೆಗಳಿಗೆ ಸ್ಮಾರ್ಟ್ ಟಿವಿಗಳ ಅಗತ್ಯವಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಗೌಡ ಹೇಳಿದರು.
ಅಮ್ಮನಬ್ಯಾಡರಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಳೇಯ ವಿದ್ಯಾರ್ಥಿಗಳು ಕೊಡುಗೆಯಾಗಿ ನೀಡಿದ ಸ್ಮಾರ್ಟ್ ಟಿವಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಮಕ್ಕಳು ಸ್ಮಾರ್ಟ್ ತರಗತಿಗಳಿಗೆ ಸಿದ್ಧರಾಗಬೇಕು. ಈ ನಿಟ್ಟಿನಲ್ಲಿಶಾಲೆಯ ಹಳೆಯ ವಿದ್ಯಾರ್ಥಿಗಳ ಕೊಡುಗೆ ಸಂತಸದ ವಿಚಾರ ಎಂದರು.
ಮುಖ್ಯ ಶಿಕ್ಷಕ ಜಯಪ್ರಕಾಶ್ ಎಚ್ ಮಾತನಾಡಿ, ಓದಿದ ಶಾಲೆಯ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದರು. ಶಾಲೆಗೆ ಸ್ಮಾರ್ಟ್ ಟಿವಿ ಕೊಡುಗೆ ನೀಡಿದ ಹಳೇಯ ವಿದ್ಯಾರ್ಥಿಗಳಾದ ಕೇಶವಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಅವರನ್ನು ಅಭಿನಂದಿಸಲಾಯಿತು.ಎಸ್.ಡಿ.ಎಂ.ಸಿ ಅಧ್ಯಕ್ಷ ಮಂಜುನಾಥ ಅಧ್ಯಕ್ಷತೆವಹಿಸಿದ್ಧರು.
ಶಿಕ್ಷಣ ಸಂಯೋಜನಾಧಿಕಾರಿ ಉಮೇಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕುಮಾರ್, ಸಮೂಹ ಸಂಪನ್ಮೂಲ ವ್ಯಕ್ತಿ ಚಂದ್ರಕಲಾ, ಶಿಕ್ಷಕ ತೀರ್ಥಕುಮಾರ್ ಕೆ.ಎಸ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.