ADVERTISEMENT

ಪಿಡಿಒಗಳು ರಾಕ್ಷಸರು: ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 18:45 IST
Last Updated 11 ಸೆಪ್ಟೆಂಬರ್ 2020, 18:45 IST
ಸೋಮಣ್ಣ
ಸೋಮಣ್ಣ   

ಹಾಸನ: ‘ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮಾಡುವ ಪಾಪದ ಕೆಲಸಕ್ಕೆ ನೀವು ಹೊಣೆಗಾರರಾಗಬೇಡಿ. ನಿಮ್ಮ ಪಾಪಗಳನ್ನು ಇನ್ನಾದರೂ ತೊಳೆದುಕೊಳ್ಳಿ. ಇಷ್ಟೆಲ್ಲಾ ಹೇಳಿದರೂ ಅರ್ಥ ಮಾಡಿಕೊಳ್ಳದಿದ್ದರೆ ದೇವರು ಕ್ಷಮಿಸಲ್ಲ. ಪಿಡಿಒಗಳು ರಾಕ್ಷಸರು’ ಎಂದು ವಸತಿ ಸಚಿವ ವಿ.ಸೋಮಣ್ಣ ಹರಿಹಾಯ್ದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ವಿವಿಧ ವಸತಿ ಯೋಜನೆಗಳ ಅನುಷ್ಠಾನ ಮತ್ತು ಅಭಿವೃದ್ಧಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಕಾರ್ಯನಿರ್ವಾಹಕ ಅಧಿಕಾರಿಗಳು ಹೇಳಿದ್ದೇ ಶಾಸನವಲ್ಲ. ಏನ್ ಮಾಡ್ತಿರೋ ಗೊತ್ತಿಲ್ಲ. ನನಗೆ ರಿಸಲ್ಟ್ ಬೇಕು. ಬಡವರ ಹೊಟ್ಟೆ ಉರಿಸಬೇಡಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.