ADVERTISEMENT

ಬೀದಿ ನಾಯಿ ದಾಳಿ: ಶಿಕ್ಷಕಿಗೆ ತೀವ್ರ ಗಾಯ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2021, 14:56 IST
Last Updated 21 ಆಗಸ್ಟ್ 2021, 14:56 IST

ಹಾಸನ: ತಾಲ್ಲೂಕಿನ ಸೀಗೆ ಗ್ರಾಮದ ಬಳಿ ಶಿಕ್ಷಕಿ ಶಕುಂತಲಾ ಅವರ ಮೇಲೆ ಬೀದಿ ನಾಯಿಗಳು ಶನಿವಾರ ದಾಳಿ ನಡೆಸಿ ಗಾಯಗೊಳಿಸಿವೆ.

ವೀರಾಪುರ ಗ್ರಾಮದ ಶಾಲೆಗೆಬೆಳಿಗ್ಗೆಸೀಗೆ ಕೆರೆ ಏರಿ ಮೇಲೆ ನಡೆದುಕೊಂಡು ಹೋಗುವಾಗ ದಿಢೀರ್ ದಾಳಿ ಮಾಡಿದ ಬೀದಿ ನಾಯಿಗಳಹಿಂಡು ಶಿಕ್ಷಕಿಯ ಮುಖದ ಭಾಗಕ್ಕೆ ಕಚ್ಚಿ ಗಾಯಗೊಳಿಸಿವೆ. ಶಿಕ್ಷಕಿಯ ಚೀರಾಟ ಕೇಳಿ ಸ್ಥಳೀಯರು ಸಹಾಯಕ್ಕೆ ಧಾವಿಸಿದರು. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

‘ಹಾಸನ ನಗರ ಸೇರಿದಂತೆ ತಾಲ್ಲೂಕಿನಾದಾದ್ಯಂತ ಬೀದಿ ನಾಯಿಗಳ ಉಪಟಳ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸಲು ಭಯಪಡುವಂತಾಗಿದೆ. ಈ ಬಗ್ಗೆ ನಗರಸಭೆಗೆ ಸಾಕಷ್ಟು ಬಾರಿ ದೂರು ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂಬುದು ಸಾರ್ವಜನಿಕರು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.