ADVERTISEMENT

ಹಾಸನ ಜಿಲ್ಲೆಯನ್ನು ರಾಜ್ಯದಲ್ಲಿ ನಂಬರ್ 1 ಮಾಡುವೆ: ಎಚ್‌.ಡಿ. ರೇವಣ್ಣ

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2021, 15:59 IST
Last Updated 14 ಡಿಸೆಂಬರ್ 2021, 15:59 IST
ಗೆಲುವಿನ ನಂತರ ಚರ್ಚೆಯಲ್ಲಿ ತೊಡಗಿದ್ದ ಸಂಸದ ಪ್ರಜ್ವಲ್‌– ಸೂರಜ್‌
ಗೆಲುವಿನ ನಂತರ ಚರ್ಚೆಯಲ್ಲಿ ತೊಡಗಿದ್ದ ಸಂಸದ ಪ್ರಜ್ವಲ್‌– ಸೂರಜ್‌   

ಹಾಸನ: ‘ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಜಿಲ್ಲೆಗೆ ನೀಡಿದ ಕೊಡುಗೆಗೆ ಫಲ ಸಿಕ್ಕಿದೆ’ ಎಂದು ಶಾಸಕ ಎಚ್‌.ಡಿ. ರೇವಣ್ಣ ಹೇಳಿದರು.

ಜೆಡಿಎಸ್ ಅಭ್ಯರ್ಥಿ ಆರ್.ಸೂರಜ್ ಗೆಲುವು ಸಾಧಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ ‘ನನ್ನ ಪುತ್ರ ಸೂರಜ್ ಅವರ ಗೆಲುವಿಗೆ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು , ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಿದ್ದಾರೆ. ಅವರ ನಿರೀಕ್ಷೆಗಳನ್ನು ಹುಸಿ ಮಾಡದೆ ಹಾಸನ ಜಿಲ್ಲೆ ಅಭಿವೃದ್ಧಿಯಲ್ಲಿ ರಾಜ್ಯದಲ್ಲಿಯೇ ನಂ.1 ಸ್ಥಾನಕ್ಕೆ ತರಲು ಶ್ರಮಿಸುತ್ತೇವೆ’ ಎಂದು ತಿಳಿಸಿದರು.

‘ಜನರ ನಿರೀಕ್ಷೆಗಳು ಹುಸಿಯಾಗದಂತೆ ನಡೆದುಕೊಳ್ಳುತ್ತೇವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಜೆಡಿಎಸ್ ಅಧಿಕಾರಕ್ಕೆ ತರುವ ಗುರಿ ಇದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.