ADVERTISEMENT

ವಂಚನೆ ಆರೋಪ: ತಮಿಳುನಾಡು ಮಾಜಿ ಸಚಿವ ಕೆ.ಟಿ.ರಾಜೇಂದ್ರ ಬಾಲಾಜಿ ಹಾಸನದಲ್ಲಿ ಬಂಧನ

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 12:50 IST
Last Updated 5 ಜನವರಿ 2022, 12:50 IST
ಹಾಸನದಲ್ಲಿ ಬುಧವಾರ ಎಐಡಿಎಂಕೆ ಮುಖಂಡ, ಮಾಜಿ ಸಚಿವ ಕೆ.ಟಿ.ರಾಜೇಂದ್ರ ಬಾಲಾಜಿ ಅವರನ್ನು ತಮಿಳುನಾಡಿನ ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವ ದೃಶ್ಯ. 
ಹಾಸನದಲ್ಲಿ ಬುಧವಾರ ಎಐಡಿಎಂಕೆ ಮುಖಂಡ, ಮಾಜಿ ಸಚಿವ ಕೆ.ಟಿ.ರಾಜೇಂದ್ರ ಬಾಲಾಜಿ ಅವರನ್ನು ತಮಿಳುನಾಡಿನ ಪೊಲೀಸರು ಬಂಧಿಸಿ ಕರೆದೊಯ್ಯುತ್ತಿರುವ ದೃಶ್ಯ.    

ಹಾಸನ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಡಿಎಂಕೆ ಮುಖಂಡ, ಮಾಜಿ ಸಚಿವ ಕೆ.ಟಿ.ರಾಜೇಂದ್ರ ಬಾಲಾಜಿ ಅವರನ್ನು ನಗರದಲ್ಲಿ ಬುಧವಾರ ತಮಿಳುನಾಡಿನ ಪೊಲೀಸ್ ಇನ್‌ಸ್ಪೆಕ್ಟರ್‌ ಹರೀಶ್ ಬಾಬು ನೇತೃತ್ವದ ತಂಡ ಬಂಧಿಸಿದೆ.

ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಸುಮಾರು 23 ಮಂದಿಯಿಂದ ₹ 3 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂದು ಸಚಿವ ಹಾಗೂ ಸಹಚರರ ವಿರುದ್ಧ ಪ್ರಕರಣ ದಾಖಲಾಗಿತ್ತು. ಅಲ್ಲಿನಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ನಂತರ ತಲೆ ಮರೆಸಿಕೊಂಡಿದ್ದ ಆರೋಪಿಗಾಗಿ ಪೊಲೀಸರು ಬಲೆ ಬೀಸಿ, ಹಾಸನ ಪೊಲೀಸರಿಗೂ ಮಾಹಿತಿ ನೀಡಿದ್ದರು.

ಖಚಿತ ಮಾಹಿತಿ ಮೇರೆಗೆ ಬೆನ್ನಟ್ಟಿದ ಪೊಲೀಸರು, ನಗರದ ವಾರ್ತಾ ಇಲಾಖೆ ಮುಂಭಾಗ ಆರೋಪಿ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿ ವಶಕ್ಕೆ ಪಡೆದು ಚೆನ್ನೈಗೆ ಕರೆದೊಯ್ದರು. ವಶಕ್ಕೆ ಪಡೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.