ADVERTISEMENT

ಸಕಲೇಶಪುರ: ಬಾಸುಂಡೆ ಬರುವಂತೆ ಒಂದನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿ ಥಳಿತ

​ಪ್ರಜಾವಾಣಿ ವಾರ್ತೆ
Published 19 ಜುಲೈ 2025, 4:56 IST
Last Updated 19 ಜುಲೈ 2025, 4:56 IST
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಬ್ಲಾಸಂ ಶಾಲೆಯ 1ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿ ಥಳಿಸಿರುವುದು
ಸಕಲೇಶಪುರ ತಾಲ್ಲೂಕಿನ ಬಾಳ್ಳುಪೇಟೆಯ ಬ್ಲಾಸಂ ಶಾಲೆಯ 1ನೇ ತರಗತಿ ವಿದ್ಯಾರ್ಥಿಗೆ ಶಿಕ್ಷಕಿ ಥಳಿಸಿರುವುದು   

ಸಕಲೇಶಪುರ: ತಾಲ್ಲೂಕಿನ ಬಾಳ್ಳುಪೇಟೆ ಗ್ರಾಮದ ಬ್ಲಾಸಮ್ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಗೆ ಮೈಮೇಲೆ ಬಾಸುಂಡೆ ಬರುವಂತೆ ತರಗತಿಯ ಶಿಕ್ಷಕಿ ರಂಜಿತಾ ಶುಕ್ರವಾರ ಹೊಡೆದಿದ್ದು, ವಿದ್ಯಾರ್ಥಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

ಈ ಸಂಬಂಧ ವಿದ್ಯಾರ್ಥಿಯ ಪೋಷಕರು ಶಾಲೆಯ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದಾರೆ. ವಿದ್ಯಾರ್ಥಿಗೆ ಬೆನ್ನಿನ ಮೇಲೆ ಬಾಸುಂಡೆಗಳು ಬಂದಿದ್ದು, ವೈದ್ಯರಿಂದ ಚಿಕಿತ್ಸೆ ಕೊಡಿಸಲಾಗಿದೆ. ವಿದ್ಯಾರ್ಥಿಯ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವ ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT