ADVERTISEMENT

ಅಪಘಾತ: ಶಿಕ್ಷಕ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 2:42 IST
Last Updated 19 ಸೆಪ್ಟೆಂಬರ್ 2020, 2:42 IST

ಚನ್ನರಾಯಪಟ್ಟಣ: ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಮೋಟಾರ್ ಬೈಕ್‌ಗೆ ಇನೋವಾ ಕಾರು ಗುರುವಾರ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟಿದ್ದಾರೆ.

ಡಿ.ಕಾಳೇನಹಳ್ಳಿ ಗ್ರಾಮದ ಈಶ್ವರೇಗೌಡ (50) ಮೃತ ವ್ಯಕ್ತಿ. ಪಟ್ಟಣದಿಂದ ಊರಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಈಶ್ವರೇಗೌಡ ಅವರಿಗೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಬೆಳಿಗ್ಗೆ ಮೃತಪಟ್ಟರು. ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಚಾಲಕ ನಾಪತ್ತೆಯಾಗಿದ್ದಾನೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಗತವಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈಶ್ವರೇಗೌಡ ಶಿಕ್ಷಕರಾಗಿ ಸೇವೆಸಲ್ಲಿಸುತ್ತಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT