ಹಾಸನ: ಮಹನೀಯರ ಜೀವನ ಶೈಲಿ, ಆದರ್ಶ, ಆಧ್ಯಾತ್ಮಿಕ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಪ್ರೀತಂ ಜೆ ಗೌಡ ಕರೆ ನೀಡಿದರು.
ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ಬುಧವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದಏರ್ಪಡಿಸಿದ್ದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ, ಜಗಜ್ಯೋತಿ ಬಸವಣ್ಣ, ಶಂಕರಾಚಾರ್ಯ, ಭಗೀರಥ,ನಾಡ ಪ್ರಭು ಕೆಂಪೇಗೌಡ, ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹನೀಯರು ಯಾವುದೇ ನಿರೀಕ್ಷೆ ಇಲ್ಲದೆ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಗಳುಇನ್ನೂ ಜೀವಂತವಾಗಿವೆ. ಅವರುಹಾಕಿಕೊಟ್ಟ ದಾರಿಯಲ್ಲಿ ಪ್ರತಿಯೊಬ್ಬರು ಸಾಗಿ ಸಜ್ಜನ ವ್ಯಕ್ತಿಗಳಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್. ಗಿರೀಶ್, ಉತ್ತಮ ಸಾಧನೆ ಮೂಲಕ ಸಮಾಜಕ್ಕೆಕೊಡುಗೆ ನೀಡುವುದರಿಂದ ಜೀವನ ಸಾರ್ಥಕವಾಗುತ್ತದೆ. ಯಾವ ಕೆಲಸಗಳು ಹೂವಿನ ಹಾದಿಯಾಗಿಲ್ಲ.ಮುಳ್ಳಿನ ಹಾದಿಯಲ್ಲಿಯೇ ನಡೆದು ಯಶಸ್ಸು ಕಾಣಬೇಕು. ಮಹನೀಯರ ತತ್ವಾದರ್ಶಗಳು ಜೀವನದಲ್ಲಿದಾರಿ ದೀಪವಾಗಲಿವೆ. ಇಂತಹವರಿಂದ ಸಾಕಷ್ಟು ಮಂದಿ ಪ್ರೆರೇಪಿತರಾಗಿ ಅನೇಕ ಸಾಧನೆ ಮಾಡಿದ್ದಾರೆಎಂದು ನುಡಿದರು.
ಮಕ್ಕಳಿಗೆ ಮಹನೀಯರ ಬಗ್ಗೆ ಅರಿವು ಮೂಡಿಸಿದರೆ ಮುಂದಿನ ದಿನಗಳಲ್ಲಿ ಯಶಸ್ಸು ಸಾಧಿಸಲು ಸಹಕಾರಿಆಗುತ್ತದೆ. ಕೆಂಪೇಗೌಡರ ನೆನಪಿಗಾಗಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂರು ಅಡಿ ಎತ್ತರದಪ್ರತಿಮೆ ಸಹ ನಿರ್ಮಾಣವಾಗುತ್ತಿದೆ ಎಂದರು.
ವಿಶೇಷ ಉಪನ್ಯಾಸಕ ಡಾ. ಸತ್ಯನಾರಾಯಣ ಮಾತನಾಡಿ, ಬಸವಣ್ಣ ರಚಿಸಿರುವ ವಚನಗಳನ್ನುಅಧ್ಯಯನದಲ್ಲಿ ತೊಡಗಿಕೊಂಡು ಸಮಾಜ ಸೇವೆಗೆ ಮುಂದಾಗಬೇಕು. ರಾಜಕೀಯ, ಸಾಹಿತ್ಯಿಕಚಿಂತನೆಗಳನ್ನು ಬದಿಗಿಟ್ಟು, ದುಡಿದು ತಿನ್ನುವ ಸಂಸ್ಕೃತಿ ಕಲಿಸಿದವರು ಮೇರು ಪುರುಷರು. ಭಾರತೀಯಸಂಸ್ಕೃತಿ, ಸಂಸ್ಕಾರಗಳಿಗೆ ಪುರಾತನ ಇತಿಹಾಸವಿದ್ದು, ಅದನ್ನು ಆಚಾರ್ಯರು, ವಚನಕಾರರು ಉಳಿಸಿ,ಬೆಳೆಸಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎ. ಪರಮೇಶ್, ಹೆಚ್ಚುವರಿ ಪೊಲೀಸ್ವರಿಷ್ಟಾಧಿಕಾರಿ ಬಿ.ಎನ್. ನಂದಿನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಎಂ.ಡಿ.ಸುದರ್ಶನ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ, ಅಖಿಲ ಭಾರತವೀರಶೈವ ಮಹಾ ಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.