ADVERTISEMENT

ಹಾಸನ: ಮಚ್ಚಿನಿಂದ ಕೊಚ್ಚಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 24 ಮೇ 2021, 5:28 IST
Last Updated 24 ಮೇ 2021, 5:28 IST
ಭರತ್
ಭರತ್   

ಹಾಸನ: ಹಣಕಾಸು ವ್ಯವಹಾರ ಹಾಗೂ ವೈಷಮ್ಯದ ಹಿನ್ನೆಲೆಯಲ್ಲಿ ನಗರದ ಹೊರವಲಯದ 80 ಅಡಿ ರಸ್ತೆಯಲ್ಲಿ ಯುವಕನನ್ನು ಮಚ್ಚಿನಿಂದ ಕೊಚ್ಚಿ ಭಾನುವಾರ ಹತ್ಯೆ ಮಾಡಲಾಗಿದೆ.

ನಗರದ ವಲ್ಲಭಾಯ್ ರಸ್ತೆಯ ಹೂವಿನ ವ್ಯಾಪಾರಿ ಭರತ್ (29) ಕೊಲೆಯಾದ ಯುವಕ. ಬೈಕ್‌ನಲ್ಲಿ ಬಿಡಿ ಹೂವುಗಳನ್ನು ಮಾರಾಟ ಮಾಡಲು ನಗರದ 80 ಅಡಿ ರಸ್ತೆಯ ರಾಜ್‍ಕುಮಾರ್ ನಗರದ ಬಳಿ ಹೋಗುತ್ತಿದ್ದ ವೇಳೆ ಎರಡು ಬೈಕಿನಲ್ಲಿ ಬಂದು ಅಡ್ಡಹಾಕಿದ ನಾಲ್ವರು ಮಚ್ಚಿನಿಂದ ಕೊಚ್ಚಿ ಹಾಕಿದ್ದಾರೆ. ಘಟನೆಯಲ್ಲಿ ಭರತ್‌ನ ತಲೆ ಎರಡು ಭಾಗವಾಗಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಭರತ್ ಈ ಹಿಂದೆ ಕೆಂಚ ಮತ್ತು ಲೋಕಿ ಮರ್ಡರ್ ಪ್ರಕರಣದಲ್ಲಿ ಆರೋಪಿಯಾಗಿದ್ದ. ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ. ಆತನ ಸ್ನೇಹಿತರೇ ಹಣಕಾಸಿನ ವಿಚಾರಕ್ಕೆ ಹತ್ಯೆ ಮಾಡಿರಬಹುದು ಎಂದು ಶಂಕಿಸಲಾಗಿದೆ.

ADVERTISEMENT

ಘಟನಾ ಸ್ಥಳಕ್ಕೆ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆ ಪಿಎಸ್‍ಐ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.