ADVERTISEMENT

ಕರಗ ಮಹೋತ್ಸವ ವೇಳೆ ಕಲ್ಲು ತೂರಾಟ

​ಪ್ರಜಾವಾಣಿ ವಾರ್ತೆ
Published 14 ಮೇ 2019, 17:25 IST
Last Updated 14 ಮೇ 2019, 17:25 IST

ಅರಸೀಕೆರೆ: ನಗರದಲ್ಲಿ ಮಂಗಳವಾರ ನಡೆದ ಮುತ್ತು ಮಾರಿಯಮ್ಮ ಕರಗ ಮಹೋತ್ಸವದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಹಾಸನ ರಸ್ತೆ ಬಲಭಾಗದ ಬಡಾವಣೆಯಲ್ಲಿರುವ ಮುತ್ತು ಮಾರಿಯಮ್ಮ ಕರಗ ಮಹೋತ್ಸವ ನಿಮಿತ್ತ ಎರಡು ದಿನಗಳಿಂದ ಉತ್ಸವ ನಡೆಯುತ್ತಿದ್ದು, ಉತ್ಸವ ಸಾಗುತ್ತಿದ್ದ ವೇಳೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಆದರೆ, ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಿಸಿ, ತಿಳಿಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT