ಅರಸೀಕೆರೆ: ತಾಲ್ಲೂಕಿನ ಬಾಣಾವರ ಹೋಬಳಿಯ ಕಲ್ಗುಂಡಿ ಗ್ರಾಮದ ಬಳಿ ಎರಡು ವರ್ಷದ ಹಾಗೂ ಒಂದು ವರ್ಷದ ಎರಡು ಚಿರತೆಗಳು ಅನುಮಾನಾಸ್ಪದವಾಗಿ ಶುಕ್ರವಾರ ಮೃತಪಟ್ಟಿವೆ.
ಪಶು ವೈದ್ಯಾಧಿಕಾರಿಗಳಾದ ಹರೀಶ್ ಹಾಗೂ ವರದರಾಜ್ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು.
‘ಸಾವಿಗೆ ಕಾರಣ ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ತಾಲ್ಲೂಕು ವಲಯ ಅರಣ್ಯಾಧಿಕಾರಿ ದಯಾನಂದ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.