ADVERTISEMENT

ಬೇಲೂರು: ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರ ಸಾವು

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2022, 7:31 IST
Last Updated 11 ಮಾರ್ಚ್ 2022, 7:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೇಲೂರು: ತಾಲ್ಲೂಕಿನ ಕಡೇಗರ್ಜೆ ಗ್ರಾಮದಲ್ಲಿ ಶುಕ್ರವಾರ ಕಾಡಾನೆಗಳದಾಳಿಗೆ ಸಿಲುಕಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಶಾರದ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಚಿಕ್ಕಯ್ಯ (65), ಚಿಕ್ಕಯ್ಯ ಅಲಿಯಾಸ್‌ ಮಾರುವಡಿ (45) ಆನೆ ದಾಳಿಗೆ ಸಿಲುಕಿದ್ದಾರೆ.

ಆನೆ ಬರುತ್ತಿದ್ದಂತೆ ಅಲ್ಲಿಂದ ಪಾರಾಗಲು ಪ್ರಯತ್ನಿಸಿದರೂ ಸಾಧ್ಯವಾಗಿಲ್ಲ.ಘಟನೆ ಬಗ್ಗೆ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆನಡೆಸಿದರು. ಕಾಡಾನೆ ಹಾವಳಿ ತಗಡೆಯುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿದರು.

ADVERTISEMENT

ಪ್ರತಿಭಟನೆಯಿಂದಾಗಿ ವಾಹನ ಸಂಚಾರಕ್ಕೆ ತೊಂದರೆ ಆಗಿದೆ. ಮುಖ್ಯಮಂತ್ರಿ ಸ್ಥಳಕ್ಕೆ ಬರುವವರೆಗೂ ಮೃತದೇಹ ತೆಗೆಯಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.