ಹಾಸನ: ಪ್ರತಿಯೊಬ್ಬರೂ ಕಡ್ಡಾಯವಾಗಿ ಲಸಿಕೆ ಪಡೆಯುವುದರಿಂದ ಕೋವಿಡ್ ತಡೆಗಟ್ಟಬಹುದು ಎಂದು ಜಿಲ್ಲಾ ನ್ಯಾಯಾಧೀಶ ಶಿವಣ್ಣ ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ , ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಗರದ ಗಂಧದಕೋಠಿಯ ಸೂಪರ್ ಸ್ಪೆಷಾಲಿಟಿಆಸ್ಪತ್ರೆ ಕಾಮಗಾರಿಯ ನೀರಿನ ಟ್ಯಾಂಕ್ ಬಳಿ ಬಿಎಸ್ಆರ್ ಕಂಪನಿ ಕಚೇರಿಯಲ್ಲಿಸೋಮವಾರ ಅಸಂಘಟಿತ ವಲಸೆ ಕಾರ್ಮಿಕರಿಗೆ ಕೋವಿಡ್ ನಿಯಂತ್ರಣಕ್ಕಾಗಿ ಲಸಿಕೆ
ಹಾಕುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಲಸಿಕೆ ಪಡೆದವರು ಸಹ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ಎಚ್ಚರಿಕೆ ವಹಿಸಬೇಕು. ಸೋಂಕು ತಡೆಗಟ್ಟಲು ಸಾರ್ವಜನಿಕರ ಸಹಕಾರ ಅಗತ್ಯ. ಜಿಲ್ಲಾಡಳಿತ ಆರೋಗ್ಯ ಇಲಾಖೆ ಕೋವಿಡ್ ನಿಯಂತ್ರಿಸುವಲ್ಲಿ ಉತ್ತಮ ಪಾತ್ರ ವಹಿಸುತ್ತಿದೆ ಎಂದುತಿಳಿಸಿದರು.
ಸಿವಿಲ್ ಸೆಷನ್ಸ್ ನ್ಯಾಯಾಧೀಶ ರವಿಕಾಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್, ಕಾರ್ಮಿಕ ಅಧಿಕಾರಿ ರಾಮಕೃಷ್ಣ,ತಾಲ್ಲೂಕು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜಯ್ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.