ಹಾಸನ: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಿಜೆಪಿಗೆ ಹೊಸಬರಿದ್ದಾರೆ. ಅವರಿಗೆ ಪಕ್ಷದ ಸಿದ್ದಾಂತ, ವಿಚಾರ ತಿಳಿದುಕೊಳ್ಳಲು ಸಮಯ ಹಿಡಿಯುತ್ತದೆ ಎಂದುಶಾಸಕ ಪ್ರೀತಂ ಗೌಡ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿರಿಯರಾದ ವಿಶ್ವನಾಥ್ ಅನುಭವಗಳನ್ನು ಬಳಸಿಕೊಳ್ಳುತ್ತೇವೆ. ಆದರೆ, ಪಕ್ಷದ ಸಿದ್ಧಾಂತ ಹಾಗೂವಿಚಾರಗಳನ್ನು ಹಿರಿಯರು ಮತ್ತು ರಾಷ್ಟ್ರೀಯ ನಾಯಕರು ಮಾತನಾಡುತ್ತಾರೆ.ಬಹಿರಂಗ ಹೇಳಿಕೆ ನೀಡದಂತೆ ಪಕ್ಷದ ಸಿದ್ಧಾಂತ, ಅದಕ್ಕೆ ವಿಶ್ವನಾಥ್ ಒಳಗೊಂಡಂತೆ ಎಲ್ಲರಿಗೂ ಅನ್ವಯಿಸುತ್ತದೆ ಎಂದು ತಿಳಿಸಿದರು.
ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಜಿಲ್ಲೆಯಲ್ಲಿ ಯಾವ ರೀತಿ ಪಕ್ಷ ಸಂಘಟನೆಮಾಡಬಹುದು ಎಂಬುದರ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ. ಬಿ.ಎಸ್.ಯಡಿಯೂರಪ್ಪಅವರು ಇನ್ನೂ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದುಹೇಳಿದ್ದಾರೆ. ಅದಕ್ಕೆ ಸಹಮತ ವ್ಯಕ್ತಪಡಿಸುವುದು ಪಕ್ಷದ ಶಾಸಕನಾಗಿ ನನ್ನ ಕರ್ತವ್ಯಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.