ಸಕಲೇಶಪುರ: ಕಾಡಾನೆ ದಾಳಿಯಿಂದ ತಾಲ್ಲೂಕಿನ ಕೆಸಗುಲಿ ಗ್ರಾಮದಲ್ಲಿ ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ಗಾಯಗೊಂಡಿದ್ದಾರೆ.
ತಾಲ್ಲೂಕಿನ ಉದೇವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಪ ವಲಯ ಅರಣ್ಯಧಿಕಾರಿ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸಗೆ ಅರಣ್ಯ ಇಲಾಖೆಯಿಂದ ವ್ಯವಸ್ಥೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.