ADVERTISEMENT

ಪ್ರೀತಿ ನಿರಾಕರಿಸಿದ ಯುವತಿಯನ್ನು ಹತ್ಯೆಗೈದು ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 28 ಜನವರಿ 2021, 12:36 IST
Last Updated 28 ಜನವರಿ 2021, 12:36 IST

ಸಕಲೇಪುರ: ಪ್ರೀತಿ ನಿರಾಕರಿಸಿದಳೆಂಬ ಕಾರಣಕ್ಕೆ ಪ್ರೇಮಿಯೊಬ್ಬ ಯುವತಿಯನ್ನು ನಡುರಸ್ತೆಯಲ್ಲೇ ಕೊಚ್ಚಿ ಕೊಂದಿರುವ ಘಟನೆ ತಾಲ್ಲೂಕಿನ ಸಿದ್ದಾಪುರ ಕೋಗರವಳ್ಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಸುಷ್ಮಿತಾ (21) ಹತ್ಯೆಗೀಡಾದ ಯುವತಿ. ಈಕೆಯನ್ನು ಅದೇ ಗ್ರಾಮದ ಹೇಮಂತ್‌ (25) ಎಂಬಾತ ಕೊಲೆ ಮಾಡಿ, ತನ್ನ ಮನೆ ಹಿಂಭಾಗ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗ್ರಾಮದ ಮುಖ್ಯ ರಸ್ತೆಯಲ್ಲಿ ಯುವತಿ ನಡೆದು ಬರುತ್ತಿರುವಾಗ ಏಕಾಏಕಿ ಆಕೆಯ ಮೇಲೆ ಹೇಮಂತ್‌ ದಾಳಿ ನಡೆಸಿ, ಮಚ್ಚಿನಿಂದ ಕುತ್ತಿಗೆಯನ್ನು ತುಂಡರಿಸಿದ್ದಾನೆ. ಅಲ್ಲಿಂದ ಪರಾರಿಯಾಗಿ ಆತ್ಮಹತ್ಯೆ ಮಾಡಿಕೊಳ್ಳಲು ಕೆರೆಗೆ ಬಿದ್ದಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದ ಯುವತಿಯ ಸಂಬಂಧಿಯೊಬ್ಬರು ಈತನನ್ನು ರಕ್ಷಿಸಿದ್ದಾರೆ. ಸಂಜೆ ವೇಳೆಗೆ ಆರೋಪಿ ನೇಣಿಗೆ ಶರಣಾಗಿರುವುದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.