ADVERTISEMENT

ಕಾಲು ಜಾರಿಬಿದ್ದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2020, 2:41 IST
Last Updated 19 ಸೆಪ್ಟೆಂಬರ್ 2020, 2:41 IST
ರತನ್
ರತನ್   

ಸಕಲೇಶಪುರ: ಫಾಲ್ಸ್‌ ಒಂದರಲ್ಲಿ ಯುವಕ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ತಾಲ್ಲೂಕಿನ ಕಾಡಮನೆ ಸಮೀಪದ ಗುಡಾಣಕೆರೆ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.

ತಾಲ್ಲೂಕಿನ ಮಾರನಹಳ್ಳಿ ಗ್ರಾಮದ ನಾಗೇಶ್‌ ಎಂಬುವವರ ಪುತ್ರ ರತನ್‌ (26) ಮೃತಪಟ್ಟ ವ್ಯಕ್ತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿ ಇದ್ದ ಯುವಕ ಮಹಾಲಯ ಅಮಾವಾಸ್ಯೆ ಪೂಜೆಗೆಂದು ಮನೆಗೆ ಬಂದಿದ್ದ. ಸ್ನೇಹಿತರೊಂದಿಗೆ ಅಬ್ಬಿಗುಂಡಿ ಜಲಪಾತಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT