ಅಕ್ಕಿಆಲೂರ: ಶುಕ್ರವಾರ ಸಂಜೆ ಪಟ್ಟಣ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಉತ್ತಮ ಮಳೆ ಸುರಿಯಿತು. ಇದರಿಂದ ರಸ್ತೆಗಳೆಲ್ಲ ಜಾಲಾವೃತಗೊಂಡು ಸಂಚಾರ ಅಸ್ತವ್ಯಸ್ತವಾಯಿತು.
ಗುರುವಾರ ಸಂಜೆಯಷ್ಟೆ ಭಾರಿ ಮಳೆ ಸುರಿದು ರಸ್ತೆಗಳಲ್ಲಿ ನೀರು ನಿಂತಿತ್ತು. ಶುಕ್ರವಾರ ಮಳೆ ನೀರೂ ಅದರೊಂದಿಗೆ ಸೇರಿಕೊಂಡು ವಾಹನಗಳ ಸಂಚಾರಕ್ಕೆ ಅಡ್ಡಿಯುಂಟು ಮಾಡಿತು. ಬಸ್ ನಿಲ್ದಾಣದ ಬಳಿಯ ಸಪ್ತಗಿರಿ ಹೋಟೆಲ್ ಮುಂಭಾಗದಲ್ಲಿ ಎರಡೂವರೆ ಅಡಿಯಷ್ಟು ನೀರು ಹರಿಯಿತು.
‘ಶಿರಸಿ–ಮೊಣಕಾಲ್ಮೂರು ರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ಕೈಗೊಂಡ ಹಿನ್ನೆಲೆಯಲ್ಲಿ ಮಳೆ ಸುರಿದಾಗಲೆಲ್ಲಾ ರಸ್ತೆಯಲ್ಲಿ ನೀರು ನಿಲ್ಲುವಂತಾಗಿದೆ’ ಎಂದು ಸ್ಥಳೀಯರು ದೂರಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.