ರಾಣೆಬೆನ್ನೂರು: ತಾಲ್ಲೂಕಿನ ಹನುಮನಮಟ್ಟಿ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬುಧವಾರ ಖಾಸಗಿ ಬಸ್ ಮತ್ತು ಲಾರಿ ಮಧ್ಯ ಡಿಕ್ಕಿ ಸಂಭವಿಸಿ 13 ಜನರು ಗಾಯಗೊಂಡಿದ್ದಾರೆ.ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಚಲಿಸುತ್ತಿದ್ದ ವಿಆರ್ಎಲ್ ಬಸ್ ಹಾಗೂ ಹುಬ್ಬಳ್ಳಿ ಕಡೆಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಲಾರಿ ಮಧ್ಯ ಡಿಕ್ಕಿ ಸಂಭವಿಸಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮರಳು ಅಕ್ರಮ: ಎರಡು ಲಾರಿ ವಶ
ಗುತ್ತಲ: ಸಮೀಪದ ತುಂಗಭದ್ರಾ ನದಿಯಿಂದ ಮರಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ 2 ಲಾರಿಗಳನ್ನು ಉಪತಹಶೀಲ್ದಾರ್ ಗವಿಸಿದ್ಧಪ್ಪ ದ್ಯಾಮಣ್ಣನವರ ಮಾರ್ಗದರ್ಶನದಲ್ಲಿ ಮಂಗಳವಾರ ವಶಪಡಿಸಿಕೊಳ್ಳಲಾಗಿದೆ.ಕಾರ್ಯಾಚರಣೆಯಲ್ಲಿ ಕಂದಾಯ ನಿರೀಕ್ಷಕ ಆರ್.ಎಸ್.ಮಲ್ಲಾಡದ, ಗ್ರಾಮ ಲೆಕ್ಕಾಧಿಕಾರಿ ಫಕ್ಕಿರೇಶ ಬಾರ್ಕಿ, ಸಬ್ಇನ್ಸ್ಪೆಕ್ಟರ್ ಬಸವರಾಜ ಕಾಮನಬೈಲ ಇದ್ದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್ ಅಪಘಾತ: ಸ್ಥಳದಲ್ಲಿಯೇ ಇಬ್ಬರ ಸಾವು
ಹಂಸಭಾವಿ: ಸಮೀಪದ ಚಿಕ್ಕೊಣತಿ ಗ್ರಾಮದ ದೇವತಿಕಟ್ಟಿ ಕೆರೆ ಬಳಿ ಬುಧವಾರ ಬೈಕ್ ಉರುಳಿ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿದ್ದಾರೆ. ಹುಬ್ಬಳ್ಳಿ ಆನಂದ ನಗರ ನಿವಾಸಿಗಳಾದ ಮಹದೇವ ಹನುಮಂತಪ್ಪ ಗುದ, ಗುರುಲಿಂಗಯ್ಯ ಸಿದ್ಧರಾಮಸ್ವಾಮಿಮಠ ಮೃತರು.ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.