ADVERTISEMENT

ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2017, 9:07 IST
Last Updated 26 ಅಕ್ಟೋಬರ್ 2017, 9:07 IST
ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ
ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಿ   

ರಟ್ಟೀಹಳ್ಳಿ: ‘ಗ್ರಾಮೀಣ ಪ್ರದೇಶದಲ್ಲಿ ಬೂತ್ ಮಟ್ಟದ ಸಭೆಗಳನ್ನು ನಡೆಸಿ ಕೇಂದ್ರ ಸರ್ಕಾರದ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುವುದೇ ಯುವ ಮೋರ್ಚಾದ ಮೂಲ ಉದ್ದೇಶ’ ಎಂದು ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ ನಾಗಣ್ಣನವರ ಹೇಳಿದರು.

ಸಮೀಪದ ಕಡೂರ ಗ್ರಾಮದಲ್ಲಿ ಈಚೆಗೆ ನಡೆದ ‘ಬಿಜೆಪಿ ಯುವ ಮೋರ್ಚಾ ಸಭೆ’ಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಶಶಿಧರ ಹೊಸಳ್ಳಿ ಮಾತನಾಡಿ, ‘ಗ್ರಾಮೀಣ ಪ್ರದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ. ಆದ್ದರಿಂದ, ನಮ್ಮ ರಾಜ್ಯದಲ್ಲಿಯೂ ಕೂಡಾ ಮುಂಬರುವ 2018ರ ವಿಧಾಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಾಗಿದೆ’ ಎಂದರು.

ADVERTISEMENT

ಪಟ್ಟಣ ಪಂಚಾಯ್ತಿ ಸದಸ್ಯ ಮಹೇಂದ್ರ ಬಡಳ್ಳಿ, ಅಧ್ಯಕ್ಷ ಶಿವಕುಮಾರ ತಿಪ್ಪಶೆಟ್ಟಿ, ಹನುಮಂತಪ್ಪ ಬಳಿಗಾರ, ಶೇಖಪ್ಪ ತುಮ್ಮಿನಕಟ್ಟಿ, ರಾಮನಗೌಡ ಗಂಟೆಪ್ಪಗೌಡ್ರ, ರುದ್ರಗೌಡ ಸಾಹುಕಾರ, ವೀರಪ್ಪ ಬಿದರಿ, ಸಿದ್ದನಗೌಡ ಮಾಜಿಗೌಡ್ರ, ಪ್ರಭು ನಾಡಗೇರ, ಜಯಪ್ಪ ಸಾಹುಕಾರ, ಸುರೇಶ ದೊಡ್ಡಕ್ಕಳವರ, ಹನುಮಂತಪ್ಪ ಓಲೇಕಾರ ಹಾಗೂ ಸೋಮಶೇಖರ ನಾಡಗೇರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.