ಅಕ್ಕಿಆಲೂರ: ‘ನಮ್ಮ ಶಾಲೆಗೆ ಕಟ್ಟಡ ಭಾಗ್ಯ ಒದಗಿ 10 ವರ್ಷ ಕಳೆದರೂ ಶೌಚಾಲಯ ಭಾಗ್ಯ ಇನ್ನೂ ಒದಗಿಲ್ಲ. ಈ ಕುರಿತು ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ. ಹೀಗಾಗಿ ನಿವೇ ಕ್ರಮ ಕೈಗೊಳ್ಳಬೇಕು’ ಎಂದು ಹಿರೇಬಾಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಾಗವೇಣಿ ತಿಮ್ಮಾಪೂರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
‘ಶೌಚಾಲಯ ನಿರ್ಮಾಣಕ್ಕೆ ಸಾಕಷ್ಟು ಸ್ಥಳಾವಕಾಶ ಇದ್ದರೂ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಪರಿಣಾಮ ಶಿಕ್ಷಕರು, ವಿದ್ಯಾರ್ಥಿಗಳು ಬಯಲು ಶೌಚಕ್ಕೆ ಹೋಗುತ್ತಿದ್ದಾರೆ. ಕೂಡಲೇ ಶಾಲಾ ಆವರಣದಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡುಬೇಕು’ ಎಂದು ಪತ್ರದಲ್ಲಿ ವಿದ್ಯಾರ್ಥಿನಿ ಬರೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.