ಬ್ಯಾಡಗಿ: ತಾಲ್ಲೂಕಿನ ಕದರಮಂಡಲಗಿ ಗ್ರಾಮದ ಕಾಂತೇಶ ಕಲ್ಯಾಣ ಮಂಟಪದ ಆವರಣದಲ್ಲಿ ಚಂದನ ಟಿವಿ ವಾಹಿನಿ ಕನಕೋತ್ಸವದ ಅಂಗವಾಗಿ `ಮಧುರ ಮಧುರವೀ ಮಂಜುಳಗಾನ' ಕಾರ್ಯ ಕ್ರಮವನ್ನು ಏ.14 ರಂದು ಸಂಜೆ 7 ಗಂಟೆಗೆ ಆಯೋಜಿಸಿದೆ.
ಬೆಂಗಳೂರು ದೂರದರ್ಶನ ಕೇಂದ್ರದ ಹೆಚ್ಚುವರಿ ಮಹಾ ನಿರ್ದೇಶಕ ನಾಡೋಜ ಮಹೇಶ ಜೋಷಿ ಅವರ ನೇತೃತ್ವದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಪಾಲ್ಗೊಳ್ಳುವರು ಎಂದು ದೇವಸ್ಥಾನ ಸಮಿತಿ ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.