ADVERTISEMENT

ಹಾವೇರಿ| ಲಾರಿ ಪಲ್ಟಿ: ಸ್ಥಳದಲ್ಲೇ ಮೂವರ ಸಾವು 

​ಪ್ರಜಾವಾಣಿ ವಾರ್ತೆ
Published 24 ಜನವರಿ 2022, 13:32 IST
Last Updated 24 ಜನವರಿ 2022, 13:32 IST
ಹಾವೇರಿ ತಾಲ್ಲೂಕಿನ ಕೊರಡೂರು ಗ್ರಾಮದ ಬಳಿ ಸೋಮವಾರ ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿರುವ ದೃಶ್ಯ
ಹಾವೇರಿ ತಾಲ್ಲೂಕಿನ ಕೊರಡೂರು ಗ್ರಾಮದ ಬಳಿ ಸೋಮವಾರ ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿರುವ ದೃಶ್ಯ   

ಹಾವೇರಿ: ತಾಲ್ಲೂಕಿನ ಕೊರಡೂರು ಗ್ರಾಮದ ಬಳಿ ಸೋಮವಾರ ಮೆಕ್ಕೆಜೋಳ ತುಂಬಿದ್ದ ಲಾರಿ ಪಲ್ಟಿಯಾಗಿ, ಮೂವರು ಹಮಾಲರು ಲಾರಿ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಸವಣೂರು ತಾಲ್ಲೂಕಿನ ಇಚ್ಚಂಗಿ ಗ್ರಾಮದ ಮಂಜುನಾಥ ಅಮರಾಪುರ (30), ಆನಂದ ದೇವರಮನಿ (28) ಹಾಗೂ ಮಂಜುನಾಥ ಕಿತ್ತೂರು (28) ಮೃತಪಟ್ಟವರು.

ರಸ್ತೆ ತಿರುವಿನಲ್ಲಿದ್ದ ಗುಂಡಿಯೊಳಗೆ ಚಕ್ರ ಇಳಿದ ಪರಿಣಾಮ ಲಾರಿ ಪಲ್ಟಿಯಾಯಿತು. ಪಲ್ಟಿಯಾದ ಲಾರಿಯನ್ನು ಜೆಸಿಬಿ ಮೂಲಕ ಎತ್ತಿ, ಮೃತದೇಹಗಳನ್ನು ಗ್ರಾಮಸ್ಥರು ಹೊರಗೆ ತೆಗೆದರು.

ADVERTISEMENT

ಇಚ್ಚಂಗಿ ಗ್ರಾಮದಿಂದ ಗುತ್ತಲಕ್ಕೆ ತೆರಳುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರ ಕುಟುಂಬದವರ ರೋದನ ಮುಗಿಲು ಮುಟ್ಟುವಂತಿತ್ತು.

ಗುತ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.