ಹಾವೇರಿ: 32 ಜನ ರೈತರ ಮೇಲೆ ಜಿಲ್ಲಾಡಳಿತದಿಂದ ಸುಳ್ಳು ಕೇಸ್ ದಾಖಲಿಸಿರುವುದನ್ನು ಖಂಡಿಸಿ, ಮೊಕದ್ದಮೆ ವಾಪಸ್ಸು ಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕುಘಟಕದಿಂದ ತಹಶೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ರೈತ ಮುಖಂಡ ಮಂಜುನಾಥ ಕದಂ ಮಾತನಾಡಿ, 32 ವರ್ಷಗಳಿಂದ ಸಂಘಟನೆಯು ರೈತರ ಪರವಾಗಿ ಹೋರಾಟಗಳನ್ನುಮಾಡುತ್ತ ನ್ಯಾಯವನ್ನು ಒದಗಿಸಿದೆ. ಹಿಂದಿನ ಜಿಲ್ಲಾಧಿಕಾರಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ 32 ರೈತರ ಮೇಲೆ ಸುಳ್ಳು ಮೊಕದ್ದಮೆ ಹಾಕಿ ಜೈಲಿಗೆ ಕಳುಹಿಸುವ ಹುನ್ನಾರ ನಡೆಸಿದ್ದಾರೆ ಎಂದು ಅವರು ಆರೋಪಿಸಿದರು.
ರೈತರು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು 2018ರ ಜುಲೈ 16ರಂದು ಪ್ರತಿಭಟನೆ ನಡೆಸಲಾಗಿತ್ತು. ಹಿಂದಿನ ಜಿಲ್ಲಾಧಿಕಾರಿ ರೈತರ ಮೇಲೆ ಸುಳ್ಳು ಕೇಸ್ ದಾಖಲಿಸಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆಎಂದು ಆರೋಪಿಸಿದರು.
ರೈತರ ಪರವಾಗಿ ಮಾತನಾಡುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ರೈತರ ಮೇಲಿನ ಮೊಕದ್ದಮೆ ವಾಪಸು ಪಡೆಯುವಂತೆ ಆಗ್ರಹಿಸಿದರು.
ರೈತ ಮುಖಂಡರಾದ ಸುರೇಶ ಚಲುವಾದಿ, ಹೇಮಣ್ಣ ಕೋಡಿಹಳ್ಳಿ, ಶಿವಬಸಪ್ಪ ಗೋವಿ, ಶಾರಕ್ಕ ಹಿರೇಮಠ, ಸುಮಂಗಲಾ ಇಪ್ಪಿಕೊಪ್ಪ, ನಾಗಪ್ಪ ಬೂದಿಹಾಳ, ಗದಿಗೆಪ್ಪ ಮರಳಿಹಳ್ಳಿ, ಚಂದ್ರಪ್ಪ ನವಲಿ, ನಾಗಪ್ಪ ವಾಲಿಕಾರ, ಅಜ್ಜಪ್ಪ ಕಾಳಶೆಟ್ಟಿ ಇದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.