ADVERTISEMENT

‘3549 ಬಾಕಿ ಪ್ರಕರಣ ಶೀರ್ಘ ಇತ್ಯರ್ಥ'

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 16:10 IST
Last Updated 14 ಡಿಸೆಂಬರ್ 2020, 16:10 IST
ನೆಹರು ಓಲೇಕಾರ, ಶಾಸಕ 
ನೆಹರು ಓಲೇಕಾರ, ಶಾಸಕ    

ಹಾವೇರಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಯೋಗದಲ್ಲಿ 3549 ಪ್ರಕರಣಗಳು ಬಾಕಿ ಉಳಿದಿವೆ. ಎರಡು ಹಂತಗಳಲ್ಲಿ ವಿಂಗಡಿಸಿದ್ದು, ಶೀಘದಲ್ಲೇ ಬಾಕಿ ಪ್ರಕರಣಗಳನ್ನು ಇತ್ಯರ್ಥ ಪಡಿಸುವುದಾಗಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ನೆಹರು ಓಲೇಕಾರ ತಿಳಿಸಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಈ ಹಿಂದೆ ಎರಡು ಅವಧಿಯಲ್ಲಿ ಪರಿಣಾಮಕಾರಿಯಾಗಿ ಆಯೋಗದ ಆಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ. ಚುನಾವಣೆಯ ನೀತಿಸಂಹಿತೆ ಮುಗಿದ ನಂತರ ಜಿಲ್ಲಾಮಟ್ಟದಲ್ಲಿ ಪ್ರವಾಸ ಹಮ್ಮಿಕೊಂಡು ಎಸ್ಸಿ, ಎಸ್ಟಿ ಸಮುದಾಯದವರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ನೀಡಲು ಕ್ರಮ ಕೈಗೊಳ್ಳುತ್ತೇನೆ ಎಂದರು.

‘ಹಿರಿತನದ ಆಧಾರದ ಮೇಲೆ ಸಚಿವ ಸ್ಥಾನ ಸಿಗಬೇಕಿತ್ತು. ಮುಖ್ಯಮಂತ್ರಿ ಹಾಗೂ ಸರ್ಕಾರದ ಮೇಲಿರುವ ಸಚಿವ ಆಕಾಂಕ್ಷಿಗಳ ಒತ್ತಡವನ್ನು ಅರಿತು ಬಿ.ಎಸ್‌.ಯಡಿಯೂರಪ್ಪ ಅವರು ನೀಡಿದ ಆಯೋಗವನ್ನು ಒಪ್ಪಿ ಅಧಿಕಾರ ಸ್ವೀಕಾರ ಮಾಡಿದ್ದೇನೆ’ ಎಂದರು.

ADVERTISEMENT

ಬಿಜೆಪಿ ಜಯಭೇರಿ:
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಈಗಾಗಲೇ ಗುತ್ತಲ ಮತ್ತು ಹೊಸರಿತ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.