ADVERTISEMENT

ಜವಳದ ಊಟ ಸೇವಿಸಿ 87 ಮಂದಿ ಅಸ್ವಸ್ಥ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2021, 16:33 IST
Last Updated 14 ಆಗಸ್ಟ್ 2021, 16:33 IST
ಜವಳ ಕಾರ್ಯಕ್ರಮದ ಊಟ ಸೇವಿಸಿ ಅಸ್ವಸ್ಥಗೊಂಡವರ ಆರೋಗ್ಯವನ್ನು ಸಚಿವ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಶನಿವಾರ ವಿಚಾರಿಸಿದರು
ಜವಳ ಕಾರ್ಯಕ್ರಮದ ಊಟ ಸೇವಿಸಿ ಅಸ್ವಸ್ಥಗೊಂಡವರ ಆರೋಗ್ಯವನ್ನು ಸಚಿವ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಶನಿವಾರ ವಿಚಾರಿಸಿದರು   

ಹಿರೇಕೆರೂರು: ತಾಲ್ಲೂಕಿನ ವೀರಾಪುರ ಗ್ರಾಮದ ಮನೆಯೊಂದರಲ್ಲಿ ನಡೆದ ಜವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ 87 ಜನ ಅಸ್ವಸ್ಥಗೊಂಡ ಘಟನೆ ಶುಕ್ರವಾರ ನಡೆದಿದೆ.

ಆಹಾರ ಸೇವಿಸಿದವರ ಪೈಕಿ ಅಸ್ವಸ್ಥಗೊಂಡವರಲ್ಲಿ 53 ಜನರು ಚೇತರಿಸಿಕೊಂಡಿದ್ದಾರೆ. 26 ಜನರನ್ನು ಮಾಸೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 7 ಜನರನ್ನು ಹಿರೇಕೆರೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಝಡ್.ಆರ್.ಮಕಾನದಾರ್‌ ತಿಳಿಸಿದ್ದಾರೆ.

ಸಚಿವ ಭೇಟಿ: ಕೃಷಿ ಸಚಿವ ಬಿ.ಸಿ.ಪಾಟೀಲ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ.ಬಣಕಾರ ಅವರು ಶನಿವಾರ ಮಾಸೂರು ಗ್ರಾಮದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.