ADVERTISEMENT

ಲಂಚ ಕೇಳಿದ ಅಧಿಕಾರಿಗೆ ಎತ್ತು ಕೊಡಲು ಮುಂದಾದ ರೈತ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2023, 14:23 IST
Last Updated 10 ಮಾರ್ಚ್ 2023, 14:23 IST
   

ಹಾವೇರಿ: ಸವಣೂರು ಪುರಸಭೆಯಲ್ಲಿ ಲಂಚ ಕೇಳಿದ ಅಧಿಕಾರಿಗೆ, ನನ್ನ ಬಳಿ ₹25 ಸಾವಿರ ಹಣವಿಲ್ಲ, ನನ್ನ ಎತ್ತು ತೆಗೆದುಕೊಳ್ಳಿ ಎಂದು ರೈತನೊಬ್ಬ ಅಸಹಾಯಕತೆ ತೋಡಿಕೊಂಡ ಘಟನೆ ಶುಕ್ರವಾರ ನಡೆದಿದೆ.

ಮನೆ ಖಾತೆ ಬದಲಾಯಿಸಲು ₹25 ಸಾವಿರ ಲಂಚ ಕೊಡುವಂತೆ ಅಧಿಕಾರಿಯೊಬ್ಬ ಬೇಡಿಕೆ ಇಟ್ಟಿದ್ದ.

ಎತ್ತು ಹಾಗೂ ಬಾರಕೋಲು ಸಮೇತ ಶುಕ್ರವಾರ ಪುರಸಭೆಗೆ ರೈತ ಯಲ್ಲಪ್ಪ ರಾಣೋಜಿ ಬಂದಿದ್ದರು.

ADVERTISEMENT

"ಈ ಹಿಂದೆ ಹಣ ಕೊಟ್ಟಿದ್ದೆ. ಹಣ ತೆಗೆದುಕೊಂಡವರು ವರ್ಗಾವಣೆಯಾಗಿದ್ದಾರೆ. ಈಗ ಹೊಸದಾಗಿ ಬಂದ ಅಧಿಕಾರಿಗಳು ಮತ್ತೆ ₹25 ಸಾವಿರ ಹಣ ಕೊಡಿ ಎಂದು ಬೇಡಿಕೆ ಇಡುತ್ತಿದ್ದಾರೆ" ಎಂದು ರೈತ ಯಲ್ಲಪ್ಪ ಅಳಲು ತೋಡಿಕೊಂಡರು.

ದುಡ್ಡು ಕೊಡುವ ತನಕ ಎತ್ತನ್ನು ನೀವೇ ಇಟ್ಟುಕೊಳ್ಳಿ ಎಂದು ಪುರಸಭೆ ಸಿಬ್ಬಂದಿಗೆ ರೈತ ಮನವಿ ಮಾಡಿದ.

ಯಲ್ಲಪ್ಪನ ನಡೆಗೆ ಪುರಸಭೆ ಸಿಬ್ಬಂದಿ ಕಕ್ಕಾಬಿಕ್ಕಿಯಾದರು. ಸುತ್ತಮುತ್ತಲಿನ ಜನ ಸೇರಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಯಿತು.

ಸರಿಯಾಗಿ ಬುದ್ಧಿ ಕಲಿಸಿದ ಯಲ್ಲಪ್ಪನ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.