ಹಾನಗಲ್: ಹಾನಗಲ್- ಬಂಕಾಪೂರ ರಸ್ತೆಯ ತಾಲ್ಲೂಕಿನ ಹುಣಸಿಕಟ್ಟಿ ಕ್ರಾಸ್ (ಗುಂಡೂರ) ಬಳಿಯಲ್ಲಿ ಶುಕ್ರವಾರ ಸಂಜೆ ಬಸ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಬೆಳಗಾಲಪೇಟೆ ಗ್ರಾಮದ ಚೇತನ ಈಳಿಗೇರ (32) ಮತ್ತು ಸುರೇಶ ಚಕ್ರಸಾಲಿ (33) ಮೃತಪಟ್ಟವರು. ಇವರು ಹಾನಗಲ್ನಿಂದ ಬೆಳಗಾಲಪೇಟೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಹಾನಗಲ್ ಸಾರಿಗೆ ಘಟಕಕ್ಕೆ ಸೇರಿದ ಬಸ್ ಗೋಕಾಕನಿಂದ ಹಾನಗಲ್ಗೆ ಬರುತ್ತಿತ್ತು ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.