ಹಾವೇರಿ: ಹಿಂದೂ ದೇವಾಲಯಗಳ ರಕ್ಷಣೆ ಹಾಗೂ ವ್ಯವಸ್ಥಿತ ನಿರ್ವಹಣೆಗಾಗಿ ಮುಂದಿನ ಒಂದೂವರೆ ತಿಂಗಳೊಳಗಾಗಿ ರಾಜ್ಯದ ಎಲ್ಲ ದೇವಾಲಯಗಳಿಗೂ ವಿವಿಧ ಹಂತದ ಅಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ,ರಾಜ್ಯದಲ್ಲಿ 34 ಸಾವಿರ ದೇವಾಲಯಗಳಿವೆ. ಈ ಪೈಕಿ ಒಂದು ನೂರು ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದಲ್ಲಿ ಒಂದು ಸಾವಿರ ಎ ಮತ್ತು ಬಿ ದರ್ಜೆಯ ದೇವಾಲಯಗಳು, ಉಳಿದಂತೆ 33 ಸಾವಿರದಷ್ಟು ಸಿ ದರ್ಜೆಯ ದೇವಾಲಯಗಳಿವೆ. ಎ ದರ್ಜೆಯ ದೇವಾಲಯಗಳಿಗೆ ಉಪ ವಿಭಾಗ ಮಟ್ಟದ ಅಧಿಕಾರಿಗಳನ್ನು, ಬಿ ದರ್ಜೆಯ ದೇವಾಲಯಗಳಿಗೆ ಕಂದಾಯ ನಿರೀಕ್ಷಕ ಹಾಗೂ ಸಿ ದರ್ಜೆಯ ದೇವಾಲಯಗಳಿಗೆ ಗ್ರಾಮ ಲೆಕ್ಕಾಧಿಕಾರಿಗಳನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕ ಮಾಡುವ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಗೋ ರಕ್ಷಣಾ ಕೇಂದ್ರ:ರಾಜ್ಯದ ಒಂದು ನೂರು ಎ ದರ್ಜೆಯ ದೇವಾಲಯಗಳಲ್ಲಿ ಗೋ ರಕ್ಷಣಾ ಕೇಂದ್ರವನ್ನು ತೆರೆಯಲಾಗುವುದು. ಜಿಲ್ಲೆಯ ಜನಪ್ರತಿನಿಧಿಗಳ ಮನವಿಯ ಮೇರೆಗೆ ಹಾವೇರಿ ಜಿಲ್ಲೆಯಲ್ಲಿಯೂ ಗೋ ರಕ್ಷಣಾ ಕೇಂದ್ರವನ್ನು ತೆರೆಯಲಾಗುವುದು. ಈ ಉದ್ದೇಶಕ್ಕಾಗಿ ಹತ್ತು ಎಕರೆ ಜಮೀನು ಗುರುತಿಸಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.