ADVERTISEMENT

ಮಹಾತ್ಮರ ಆದರ್ಶವನ್ನು ರೂಢಿಸಿಕೊಳ್ಳಿ: ಸದಾಶಿವ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 17:45 IST
Last Updated 9 ಮಾರ್ಚ್ 2021, 17:45 IST
ಹಾವೇರಿಯ ಸಿಂದಗಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದುಗಿನ ಪಂ.ರಾಜಗುರು ಗುರುಸ್ವಾಮಿ ಕಲಕೇರಿ ದಂಪತಿಯನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು‌
ಹಾವೇರಿಯ ಸಿಂದಗಿಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗದುಗಿನ ಪಂ.ರಾಜಗುರು ಗುರುಸ್ವಾಮಿ ಕಲಕೇರಿ ದಂಪತಿಯನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು‌   

ಹಾವೇರಿ: ‘ಮಹಾತ್ಮರ ಸ್ಮರಣೆ ಎಂದರೆ ಕೇವಲ ಅವರನ್ನು ನೆನಪಿಸಿಕೊಳ್ಳುವುದಲ್ಲ.ಅವರ ಆದರ್ಶ ಮಾರ್ಗದಲ್ಲಿ ನಡೆದು ಮೌಲ್ಯಗಳನ್ನು ರೂಢಿಸಿಕೊಳ್ಳುವುದು. ಲಿಂ. ಶಾಂತವೀರ ಪಟ್ಟಾಧ್ಯಕ್ಷರ ಸ್ಮರಣೆ ನಮ್ಮಲ್ಲಿ ಮಹಾನ್ ಬದಲಾವಣೆಗೆ ಕಾರಣವಾಗುತ್ತದೆ’ ಎಂದು ಶಿವಲಿಂಗೇಶ್ವರ ವಿರಕ್ತಮಠದ ಸದಾಶಿವ ಸ್ವಾಮೀಜಿ ಹೇಳಿದರು.

ನಗರದ ಸಿಂದಗಿಮಠದಲ್ಲಿ ಹಮ್ಮಿಕೊಂಡಿರುವ ಲಿಂ.ಶಾಂತವೀರ ಪಟ್ಟಾಧ್ಯಕ್ಷರ 41ನೇ ಪುಣ್ಯಸ್ಮರಣೋತ್ಸವದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂಸಾರದ ಜಂಟಾಟದಲ್ಲಿ ಮನಸ್ಸು ಹಗುರವಾಗಬೇಕಾದರೆ, ಸಿಂದಗಿ ಶಾಂತವೀರ ಪಟ್ಟಾಧ್ಯಕ್ಷರಂತಹ ಮಹಾನ್‌ ಚೇತನದ ಜೀವನ ಚರಿತ್ರೆಯ ಸ್ಮರಣೆ ಮಾಡಬೇಕು. ಇದರಿಂದ ಜೀವನೋತ್ಸಾಹ ಹೆಚ್ಚುತ್ತದೆ ಎಂದು ಹೇಳಿದರು.

ADVERTISEMENT

ಕಲ್ಯಾಣದಲ್ಲಿ ಅನುಭವ ಮಂಟಪ ಸ್ಥಾಪಿಸುವ ಮೂಲಕ ಸಮಾಜದ ಎಲ್ಲಾ ಜನರಿಗೂ ಸಮಾಜೋಧಾರ್ಮಿಕ ಸಂಸತ್ತನ್ನು ಪರಿಚಯಿಸಿ, ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಕಲ್ಪಿಸಿದ ಬಸವಣ್ಣ ಈ ಜಗತ್ತಿನ ಮೊದಲ ಸಮಾಜ ಸುಧಾರಕರಾಗಿದ್ದಾರೆ ಎಂದು ಹೇಳಿದರು.

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮುರಗೋಡಿನ ಸಂಜುಬಸಯ್ಯ ಮತ್ತು ಸಂಗಡಿಗರು ಹಾಸ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶಾಮ್ ಕಲ್ಯಾಣ್ ಬೆನ್ನೂರ ಹಾಗೂ ಕುಟುಂಬದವರಿಂದ ಜಾನಪದ ಗೀತೆಗಳನ್ನು ಪ್ರಸ್ತುತ ಪಡಿಸಿದರು. ಗದುಗಿನ ಪಂ.ರಾಜಗುರು ಗುರುಸ್ವಾಮಿ ಕಲಕೇರಿ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಬೈರನಹಟ್ಟಿಯ ದೊರೆಸ್ವಾಮಿಮಠದ ಶಾಂತಲಿಂಗ ಸ್ವಾಮೀಜಿ, ಹೋತನಹಳ್ಳಿಯ ಶಂಭುಲಿಂಗ ಪಟ್ಟಾಧ್ಯಕ್ಷರು, ಶಂಕರಯ್ಯ ಗುರುಮಠ, ಬಸವರಾಜ ಹೊನ್ನಿಗನೂರು, ಹನುಮಂತಪ್ಪ ಕಾಮನಹಳ್ಳಿ, ಜಿ.ಎಸ್. ಭಟ್, ಶಿವಯೋಗಿ ಹಿರೇಮಠ, ಎಂ.ಎಸ್. ಹಿರೇಮಠ, ಚನ್ನಬಸಯ್ಯ ಇದ್ದರು.

ಸಿಂದಗಿಮಠದ ಸಂಚಾಲಕ ಶಿವಬಸಯ್ಯ ಆರಾಧ್ಯಮಠ ಕಾರ್ಯಕ್ರಮವನ್ನು ನಿರ್ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.