ADVERTISEMENT

‘ಪರಿಸರ ಸಂರಕ್ಷಣೆಗೆ ಮುಂದಾಗಿ’

​ಪ್ರಜಾವಾಣಿ ವಾರ್ತೆ
Published 29 ಜುಲೈ 2021, 13:44 IST
Last Updated 29 ಜುಲೈ 2021, 13:44 IST
ಬ್ಯಾಡಗಿ ತಾಲ್ಲೂಕು ಘಾಳಪೂಜಿ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ‘ನಮ್ಮೂರು ನಮ್ಮ ಕೆರೆ ಯೋಜನೆ’ಯಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು 
ಬ್ಯಾಡಗಿ ತಾಲ್ಲೂಕು ಘಾಳಪೂಜಿ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ‘ನಮ್ಮೂರು ನಮ್ಮ ಕೆರೆ ಯೋಜನೆ’ಯಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು    

ಹಾವೇರಿ: ‘ಗಿಡ, ಮರಗಳಿಂದ ಶುದ್ಧ ಗಾಳಿ, ಸ್ವಚ್ಛ ಪರಿಸರ ನಿರ್ಮಾಣವಾಗುತ್ತದೆ. ಶಾಲೆ, ಕಾಲೇಜು, ರಸ್ತೆ ಪಕ್ಕ ಹಾಗೂ ಕೆರೆ ಅಂಗಳದಲ್ಲಿ ಸಸಿ ನೆಟ್ಟು ಪೋಷಣೆ ಮಾಡಬೇಕು ಎಂದುಧರ್ಮಸ್ಥಳ ಗ್ರಾಮಾಭಿವೃದ್ಧಿ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.

ಬ್ಯಾಡಗಿ ತಾಲ್ಲೂಕುಘಾಳಪೂಜಿ ಗ್ರಾಮ ಪಂಚಾಯಿತಿ ಕಾರ್ಯಾಲಯದಿಂದ ‘ನಮ್ಮೂರು ನಮ್ಮ ಕೆರೆ ಯೋಜನೆ’ಯಡಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕವಿತಾ ತಳವಾರ ಮಾತನಾಡಿ, ‘ನಿಂಗನಕಟ್ಟೆ ಕೆರೆಯಲ್ಲಿ ಸಂಪೂರ್ಣವಾಗಿ ಹೂಳೆತ್ತಿದ್ದು, ಮಳೆಯಿಂದ ಸಂಪೂರ್ಣವಾಗಿ ತುಂಬಿದೆ. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿನಿಂತುಹೋಗಿದ್ದ ಕೊಳವೆಬಾವಿಗಳಲ್ಲಿ ನೀರು ಕಾಣಿಸಿಕೊಂಡಿದೆ’ ಎಂದರು.

ADVERTISEMENT

ಮಾರುತಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಚ್.ಎಚ್.‌ ಕುರುಬರ ಮಾತನಾಡಿದರು. ಕೆರೆ ಸಮಿತಿ ಅಧ್ಯಕ್ಷ ರಾಮನಗೌಡ ಶಿಡ್ರಳ್ಳಿ, ಪಿಡಿಒ ಗೌಸ್ ಮೋದಿನಸಾಬ‌ ಹಾವೇರಿ ತಾಲ್ಲೂಕಿನ ಯೋಜನಾಧಿಕಾರಿ ನಾರಾಯಣ ಜಿ., ಕೃಷಿ ಮೇಲ್ವಿಚಾರಕರು ನೇಮನಗೌಡ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.