ಕುಮಾರಪಟ್ಟಣ: ಸಮೀಪದ ಮಾಕನೂರು ಗ್ರಾಮದಲ್ಲಿ ಏ.12ರಿಂದ 14ರ ವರೆಗೆ ಆಂಜನೇಯ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಲಿದೆ.
ಏ.12ರಂದು ಆಂಜನೇಯ ಸ್ವಾಮಿಗೆ ಅಭಿಷೇಕ ಮತ್ತು ಕಂಕಣ ಕಟ್ಟುವ ಕಾರ್ಯಕ್ರಮ ನೆರವೇರಲಿದೆ. ಏ.13ರಂದು ಒಪ್ಪತ್ತು ಬಿಡುವುದು ಮತ್ತು ಸಂಜೆ 4 ಗಂಟೆಗೆ ಆಂಜನೇಯ ಸ್ವಾಮಿ ರಥೋತ್ಸವ ನಡೆಯಲಿದೆ. ಏ.14ರಂದು ಭೂತನ ಸೇವೆ, ಕುದುರೆ ಬೇಟೆ ಹಾಗೂ ಓಕುಳಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.