ಹಾವೇರಿ: ಕೊರೊನಾ ಸೋಂಕು ನಿಯಂತ್ರಣದ ಉದ್ದೇಶದಿಂದ ಜಿಲ್ಲೆಯಲ್ಲಿ ಮೇ 21ರಿಂದ 25ರವರೆಗೆ ಜಿಲ್ಲಾಧಿಕಾರಿ ಸಂಪೂರ್ಣ ಲಾಕ್ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ನಗರದ ಎಪಿಂಸಿಯಲ್ಲಿನ ಎಲ್ಲ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಹಾವೇರಿ ಎಪಿಎಂಸಿ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ತಿಳಿಸಿದ್ದಾರೆ.
ನಗರದ ಹಾನಗಲ್ ರಸ್ತೆಯಲ್ಲಿರುವ ಎಪಿಎಂಸಿಯ ಆವರಣದಲ್ಲಿ ನಡೆಯುವ ತರಕಾರಿ ಸಗಟು ಹರಾಜನ್ನು ಭಾನುವಾರ ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಆ ಸಮಯದಲ್ಲಿ ಎಲ್ಲರೂ ಕೊರೊನಾ ಮಾರ್ಗಸೂಚಿ ಪಾಲಿಸಬೇಕು. ರೈತರು ಅಂದೇ ತಮ್ಮ ತರಕಾರಿಯನ್ನು ಹರಾಜಿಗೆ ತರಬಹುದು.
ಮೇ 21ರಿಂದ 25ರವರೆಗೆ ತರಕಾರಿ, ಕಾಳುಕಡಿ, ಜಾನುವಾರು ಮಾರುಕಟ್ಟೆಯು ಸಂಪೂರ್ಣವಾಗಿ ಸ್ಥಗಿತವಾಗಿರುತ್ತದೆ. ಜಿಲ್ಲಾಧಿಕಾರಿ ಅವರ ಮುಂದಿನ ಆದೇಶದ ನಂತರ ಎಪಿಎಂಸಿಯ ಕಾರ್ಯಚಟುವಟಿಕೆಗಳು ಆರಂಭಗೊಳ್ಳಲಿವೆ. ಅಲ್ಲಿಯವರೆಗೂ ರೈತರು, ವ್ಯಾಪಾರಸ್ಥರು ಕೊರೊನಾ ಹಿಮ್ಮೆಟ್ಟಿಸುವ ಈ ಕಾರ್ಯಕ್ಕೆ ಸಹಕರಿಸಬೇಕು ಎಂದು ವಿನಂತಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.