ADVERTISEMENT

ಹಾವೇರಿ: ಶಿಕ್ಷಕರ ಹುದ್ದೆ ಭರ್ತಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 8 ಜುಲೈ 2020, 15:39 IST
Last Updated 8 ಜುಲೈ 2020, 15:39 IST
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಸಂಯೋಜಕ ವಿಕಾಸ ಸೊಪ್ಪಿನ ಮತ್ತು ಇತರರು ಹಾವೇರಿಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು 
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಸಂಯೋಜಕ ವಿಕಾಸ ಸೊಪ್ಪಿನ ಮತ್ತು ಇತರರು ಹಾವೇರಿಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು    

ಹಾವೇರಿ:ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಪಶ್ಚಿಮ ಪದವೀಧರ ಮತಕ್ಷೇತ್ರದ ಸಂಯೋಜಕ ವಿಕಾಸ ಸೊಪ್ಪಿನ ಅವರು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನಿರಾಕರಿಸಲಾಗಿದೆ. ಈಗಾಗಲೇ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲು ಆರ್ಥಿಕ ಇಲಾಖೆ ಅನುಮತಿ ನೀಡಿದ್ದನ್ನು ಕೂಡ ತಡೆ ಹಿಡಿಯಲಾಗಿದೆ. ಬೋಧಕರ ಕೊರತೆ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತದೆ. ಅವರ ಅಧ್ಯಯನಕ್ಕೆ ತೊಂದರೆಯಾಗುತ್ತದೆ. ಇದರಿಂದ ವಿಧ್ಯಾರ್ಥಿಗಳು ಉತ್ತಮ ಬೋಧನೆಯಿಂದ ವಂಚಿತರಾದಂತಾಗುತ್ತದೆ ಎಂದು ತಿಳಿಸಿದ್ದಾರೆ.

ಶಿಕ್ಷಕರಾಗಿ, ಬೋಧಕರಾಗಿ ನೇಮಕಗೊಳ್ಳಲಿರುವ ಅಭ್ಯರ್ಥಿಗಳ ವಯೋಮಿತಿ ಪ್ರಶ್ನೆಯು ಇಲ್ಲಿದೆ. ಅನೇಕ ಅಭ್ಯರ್ಥಿಗಳು ಸರ್ಕಾರ ನಿಗದಿ ಪಡಿಸಿದ ವಯೋಮಿತಿಯ ಅಂಚಿನಲ್ಲಿದ್ದಾರೆ, ಈ ಆದೇಶ ಅಂಥವರನ್ನು ಕಾಯಂ ಆಗಿ ನೇಮಕಾತಿಯಿಂದ ವಂಚಿತರನ್ನಾಗಿಸುತ್ತದೆ. ಅನುದಾನಿತ ಶಿಕ್ಷಣ ಸಂಸ್ಥೆಗಳು ಎದುರಿಸುತ್ತಿರುವ ಅನೇಕ ಸಮಸ್ಯೆಗಳಲ್ಲಿ ಶಿಕ್ಷಕರ ಕೊರತೆ ಪ್ರಮುಖವಾಗಿದೆ. ವಿದ್ಯಾರ್ಥಿಗಳ ಹಾಜರಾತಿ ಕೊರತೆಯಿಂದ ಸಂಸ್ಥೆ ತನ್ನ ಅಸ್ತಿತ್ವ ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಮನವಿಯಲ್ಲಿ ಹೇಳಿದ್ದಾರೆ.ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ವಿನಾಯಿತಿ ನೀಡಿ ಹುದ್ದೆಗಳನ್ನು ತುಂಬಿಕೊಳ್ಳಲು ಅನುಮತಿ ನೀಡಬೇಕು ಎಂದು ಕೋರಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.