ADVERTISEMENT

ಸುಳ್ಳು ಸುದ್ದಿ ಹರಡಿದ ಆಯುರ್ವೇದಿಕ್‌ ವೈದ್ಯ: ಶಾಸಕರ ತರಾಟೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2020, 10:58 IST
Last Updated 14 ಮಾರ್ಚ್ 2020, 10:58 IST

ಹಾವೇರಿ: ನಗರದ ಆಯುರ್ವೇದಿಕ್‌ ವೈದ್ಯ ಶರಣು ಅಂಗಡಿ ಎಂಬಾತ, ವೈದ್ಯರ ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದರಲ್ಲಿ ಹಾವೇರಿಯಲ್ಲಿ ಕೊರೊನಾ ಪ್ರಕರಣವೊಂದು ಖಚಿತವಾಗಿದೆ ಎಂದು ಪೋಸ್ಟ್‌ ಹಾಕಿದ್ದ.

ಈತನನ್ನು ಶಾಸಕ ನೆಹರು ಓಲೇಕಾರ ಮತ್ತು ಡಿಎಚ್‌ಒ ಅವರು ನಗರದ ಪ್ರವಾಸಿ ಮಂದಿರಕ್ಕೆ ಶನಿವಾರ ಕರೆಸಿ, ವಿಚಾರಿಸಿದರು. ಆತ ‘ಕೊರೊನಾ ಬಗ್ಗೆ ಎಚ್ಚರಿಕೆ ವಹಿಸಲಿ ಎಂಬ ಉದ್ದೇಶದಿಂದ ಆ ಪೋಸ್ಟ್‌ ಅನ್ನು ಫಾರ್ವರ್ಡ್‌ ಮಾಡಿದ್ದೇನೆ. ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ’ ಎಂದು ಗೋಗರೆದ.

ಈ ಬಗ್ಗೆ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೂಕ್ತ ಕ್ರಮ ಕೈಗೊಳ್ಳಲು ಕೋರಿದ್ದೇನೆ ಎಂದು ಡಿಎಚ್‌ಒ ರಾಜೇಂದ್ರ ದೊಡ್ಡಮನಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.