ಹಾವೇರಿ: ‘ಬಂಜಾರ ಸಮುದಾಯದ ಸಂಘಟನೆಗಾಗಿ ಹಾಗೂ ಸಮಾಜದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಸಂಘಟನಾತ್ಮಕ ಹೋರಾಟ ಮಾಡುವ ತುರ್ತು ಅಗತ್ಯವಿದೆ’ ಎಂದು ಆಲ್ ಇಂಡಿಯಾ ಬಂಜಾರ ಸೇವಾ ಸಂಘದ ರಾಜ್ಯ ಘಟಕದ ಅಧ್ಯಕ್ಷ ಪಾಂಡುರಂಗ ಪಮ್ಮಾರ ಕರೆ ನೀಡಿದರು.
ಜಿಲ್ಲಾ ಬಂಜಾರ ಭವನದಲ್ಲಿ ಭಾನುವಾರ ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರ ನೇಮಕಾತಿ ಆದೇಶ ವಿತರಣೆ ಮಾಡಿ ಅವರು ಮಾತನಾಡಿದರು.
ಮಾಜಿ ಸಚಿವ ರುದ್ರಪ್ಪ ಲಮಾಣಿ ಮಾತನಾಡಿ, ‘ಬಂಜಾರ ಸಮುದಾಯದ ಜನ ತಲೆ ತಲಾಂತರದಿಂದ ಕಡುಬಡತನದಲ್ಲಿ ಹುಟ್ಟಿ, ಕಷ್ಟ ಕಾರ್ಪಣ್ಯದಿಂದ ದುಡಿದು ಸ್ವಾಭಿಮಾನದ ಜೀವನ ಸಾಗಿಸುತ್ತಿದ್ದಾರೆ. ಆಧುನಿಕ ಯುಗದಲ್ಲಿ ಸಮಾಜದ ಜನರು ದುಶ್ಚಟ ಹಾಗೂ ಮೂಢನಂಬಿಕೆಗಳನ್ನು ಬಿಡಬೇಕು. ಆಧುನಿಕ ಯುಗಕ್ಕೆ ತಕ್ಕಂತೆ ನಡೆದುಕೊಳ್ಳುವಂತೆ ಸಮಾಜದ ಜನರಲ್ಲಿ ನೂತನ ಅಧ್ಯಕ್ಷರು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಹಾವೇರಿ ಜಿಲ್ಲಾ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರನ್ನು ನೇಮಕಾತಿ ಮಾಡಿ ಆದೇಶ ಪತ್ರ ನೀಡಲಾಯಿತು.
ಜಿಲ್ಲಾ ಘಟಕದ ಅಧ್ಯಕ್ಷ ಈರಪ್ಪ ಡಿ. ಲಮಾಣಿ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂತೋಷ ಲಮಾಣಿ ಇದ್ದರು. ಜಿಲ್ಲಾ ಕಾರ್ಯದರ್ಶಿ ರಮೇಶ ಎಂ.ಲಮಾಣಿ ಕಾರ್ಯಕ್ರಮ ನಿರೂಪಿಸಿದರು. ವಾಸು ಲಮಾಣಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.