ಹಾವೇರಿ: ‘ಕೋವಿಡ್ ತುರ್ತು ಪರಿಸ್ಥಿತಿಯಲ್ಲಿ ಎಂ.ಬಿ.ಬಿ.ಎಸ್. ವೈದ್ಯರ ಕೊರತೆ ಬಂದಾಗ, ಆಯುಷ್ ವೈದ್ಯರು ಕಾರ್ಯನಿರ್ವಹಿಸಿದ್ದಾರೆ. ಮೂರನೇ ಅಲೆಎದುರಿಸಲು ಹೆಚ್ಚಿನ ವೈದ್ಯಕೀಯಸಿಬ್ಬಂದಿ ಅಗತ್ಯವಿದ್ದು ಆಯುಷ್ ವೈದ್ಯರನ್ನೇ ತಾತ್ವಿಕವಾಗಿ ಮುಂದುವರಿಸಲು ಆರೋಗ್ಯ ಸಚಿವರೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಕೋವಿಡ್ ರೂಪಾಂತರ ತಳಿಯಾದ ‘ಡೆಲ್ಟಾ ಪ್ಲಸ್’ ವೈರಸ್ ಸೋಂಕು ಹರಡದಂತೆ ಸರ್ಕಾರ ತೀವ್ರ ನಿಗಾ ವಹಿಸಿದೆ.ಈ ವೈರಸ್ನ ಬೇರೆ ಬೇರೆ ಪ್ರಕಾರಗಳು, ಪರಿಣಾಮ ಹಾಗೂ ಈಗಿನ ವ್ಯಾಕ್ಸಿನ್ ಬಳಕೆಗಳ ಕುರಿತಂತೆ ಅಧ್ಯಯನ ನಡೆಸಲಾಗುತ್ತಿದೆ. ಕೇಂದ್ರ ಆರೋಗ್ಯ ಇಲಾಖೆ ನೀಡುವ ಸಲಹೆಗಳನ್ನು ನಿಯಮಾವಳಿಗಳನ್ನು ಪಾಲಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.