ಹಂಸಭಾವಿ: ಸಮೀಪದ ದೂಪದಹಳ್ಳಿಯ ಕೃಷಿ ಜಮೀನುಗಳಲ್ಲಿ ಕರಡಿ ಕಾಣಿಸಿಕೊಂಡಿದ್ದು, ರೈತ ಸಮುದಾಯದಲ್ಲಿ ಆತಂಕ ಮೂಡಿದೆ.
ಕಳೆದೆರಡು ದಿನಗಳಿಂದ ಗ್ರಾಮದ ಚಂದ್ರಪ್ಪ ಹೆಗ್ಗೇರಿ ರೈತರ ಜಮೀನಿನಲ್ಲಿ ಕರಡಿ ಕಾಣಿಸಿಕೊಂಡಿದ್ದು, ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಈ ಭಾಗದಲ್ಲಿ ಕುರುಬರು ಬೀಡು ಬಿಟ್ಟಿದ್ದಾರೆ. ಹಾಗಾಗಿ ಅರಣ್ಯ ಇಲಾಖೆಯವರು ಕೂಡಲೇ ಕರಡಿ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.