ADVERTISEMENT

ಬಿಜೆಪಿ ಎಂದರೆ ಭ್ರಷ್ಟ ಜನತಾ ಪಾರ್ಟಿ: ಸಲೀಂ ಅಹಮದ್‌

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 13:47 IST
Last Updated 21 ಅಕ್ಟೋಬರ್ 2021, 13:47 IST
ಸಲೀಂ ಅಹಮದ್
ಸಲೀಂ ಅಹಮದ್   

ಹಾವೇರಿ:ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ.ಬಿಜೆಪಿ ಎಂದರೆ ‘ಭ್ರಷ್ಟ ಜನತಾ ಪಾರ್ಟಿ’ ಎಂದರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಗಂಭೀರ ಆರೋಪ ಮಾಡಿದರು.

ಹಾನಗಲ್ ಕ್ಷೇತ್ರದ ಹೊಂಕಣದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೊನಾ ಉಪಕರಣ ಖರೀದಿಯಲ್ಲಿ ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT