ಹಾವೇರಿ:ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಜನರ ತೆರಿಗೆ ಹಣದಲ್ಲಿ ಲೂಟಿ ಮಾಡಿದೆ.ಬಿಜೆಪಿ ಎಂದರೆ ‘ಭ್ರಷ್ಟ ಜನತಾ ಪಾರ್ಟಿ’ ಎಂದರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಗಂಭೀರ ಆರೋಪ ಮಾಡಿದರು.
ಹಾನಗಲ್ ಕ್ಷೇತ್ರದ ಹೊಂಕಣದಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, ‘ಆಡಳಿತ ಪಕ್ಷದ ಸಚಿವರುಗಳ ನಡುವೆಯೇ ಹಣ ದೋಚಲು ಕಿತ್ತಾಟ ನಡೆದಿದೆ. ರಾಜ್ಯ ಸರ್ಕಾರ ಕೊರೊನಾ ಉಪಕರಣ ಖರೀದಿಯಲ್ಲಿ ₹2 ಸಾವಿರ ಕೋಟಿ ಭ್ರಷ್ಟಾಚಾರ ನಡೆಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಗೆ ನಂಬಿಕೆ, ವಿಶ್ವಾಸವಿಲ್ಲ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.