ಹಾವೇರಿ:ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಜಿಲ್ಲೆಯ ಪಥಮ ಸಂಘಟನಾತ್ಮಕ ಸಭೆ ಶನಿವಾರ ನಡೆಯಿತು.
ಜಿಲ್ಲೆಯಲ್ಲಿರುವ 9 ಸಂಘಟನಾತ್ಮಕ ಮಂಡಳಗಳ ಅಧ್ಯಕ್ಷರಿಗೆ ತಾಲ್ಲೂಕು ಮಟ್ಟದಲ್ಲಿ ಸಂಘಟನೆಯನ್ನು ಮಾಡುವುದರ ಕುರಿತು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಜಯತೀರ್ಥ ಕಟ್ಟಿಯವರು ಮಾರ್ಗದರ್ಶನ ಮಾಡಿದರು.
ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದರಾಜ ಕಲಕೋಟಿ ಮಾತನಾಡಿ, ಕೋವಿಡ್– 19 ಕುರಿತಂತೆ 2 ತಿಂಗಳು ಅವಿಶ್ರಾಂತವಾಗಿ ಸೇವಾ ಚಟುವಟಿಕೆಗಳಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಪಕ್ಷದ ನಾಯಕರಿಗೆ ಧನ್ಯವಾದಗಳನ್ನು ತಿಳಿಸಿದರು.
ಮಾಜಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರದೀಪ ಮುಳ್ಳೂರ, ಕೃಷ್ಣಾ ಈಳಗೇರ, ಶಶಿಧರ ಹೊಸಳ್ಳಿ ಮತ್ತು 9 ಮಂಡಳ ಅಧ್ಯಕ್ಷರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.