
ಶಿಗ್ಗಾವಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ವಿದೇಶಕ್ಕೆ ಹೋದ ಸಂದರ್ಭದಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತು ಅವಹೇಳನಕಾರಿ ಮಾತುಗಳಿಂದ ಅವಮಾನಿಸಿರುವುದನ್ನು ಖಂಡಿಸಿ ಮಂಗಳವಾರ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಅವರಿಗೆ ಮನವಿ ಸಲ್ಲಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅವಮಾನ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಘಟಕ ಖಂಡಿಸುತ್ತದೆ. ಕಾಂಗ್ರೆಸ್ ಪಕ್ಷದ ನಾಯಕರು ಹೀಗೆ ಮುಂದುರೆದರೆ ಮಹಿಳಾ ಮೋರ್ಚಾದಿಂದ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಏಕಾಗುತ್ತದೆ’ ಎಂದು ಎಚ್ಚರಿಸಿದರು.
ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ವಿರುಪಾಕ್ಷಪ್ಪ ಬಳ್ಳಾರಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೋಭಾ ನಿಸ್ಸೀಮಗೌಡ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ಆಲದಕಟ್ಟಿ, ನೀಲಪ್ಪ ಚಾವಡಿ, ಕಿರಣಕುಮಾರ ಕೊಳ್ಳಿ, ಕಿರಣ ಕೊಣನವರ, ನಿಂಗಪ್ಪ ಬಟ್ಟಲಕಟ್ಟಿ, ಬಸಮ್ಮ ಅಬಲೂರ, ವಿದ್ಯಾ ಶೆಟ್ಟಿ, ಲತಾ ಬಡ್ನಿಮಠ, ರೋಹಿಣಿ ಪಾಟೀಲ, ಲತಾ ಬಣಕಾರ, ನಂದಾ ನರಗುಂಡ, ವಿಜಯಲಕ್ಷ್ಮೀ ಹೆಗಡೆ, ಅಕ್ಕಮ್ಮ ಹರ್ತಿ, ಶ್ರೀದೇವಿ ಹಿರೇಮಠ, ಕನವಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.