ADVERTISEMENT

ಬಿಜೆಪಿಯಿಂದ ಮಹಿಳೆಯರ ರಕ್ಷಣೆ ಅಸಾಧ್ಯ: ಲಕ್ಷ್ಮಿ

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚಳ: ಲಕ್ಷ್ಮಿ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2021, 3:48 IST
Last Updated 26 ಅಕ್ಟೋಬರ್ 2021, 3:48 IST
ಬ್ಯಾಗವಾದಿಯಲ್ಲಿ ಪ್ರಚಾರಕ್ಕೆ ಬಂದಿದ್ದ ಲಕ್ಷ್ಮಿ ಹೆಬ್ಬಾಳಕರ ಹಾಗೂ ಶ್ರೀನಿವಾಸ್ ಮಾನೆ ಅವರಿಗೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು
ಬ್ಯಾಗವಾದಿಯಲ್ಲಿ ಪ್ರಚಾರಕ್ಕೆ ಬಂದಿದ್ದ ಲಕ್ಷ್ಮಿ ಹೆಬ್ಬಾಳಕರ ಹಾಗೂ ಶ್ರೀನಿವಾಸ್ ಮಾನೆ ಅವರಿಗೆ ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು   

ಅಕ್ಕಿಆಲೂರ: ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ದೇಶ ಸೇರಿದಂತೆ ರಾಜ್ಯದ ನಾನಾ ಭಾಗಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಾವು ನೋಡುತ್ತಲೇ ಇದ್ದೇವೆ. ಮಹಿಳೆಯರ ಸುರಕ್ಷತೆ ಹಾಗೂ ಎಲ್ಲ ವರ್ಗದ ಬಂಧುಗಳ ಕಲ್ಯಾಣಕ್ಕೆ ಕಾಂಗ್ರೆಸ್ ಬೆಂಬಲಿಸಿ, ಆಶೀರ್ವದಿಸುವಂತೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಮನವಿ ಮಾಡಿದರು.

ಹಾನಗಲ್ ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಬ್ಯಾಗವಾದಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಮತಯಾಚಿಸಿ ಅವರು ಮಾತನಾಡಿದರು.

ಶ್ರೀನಿವಾಸ್ ಮಾನೆ ಅವರಂಥ ಯುವ ನಾಯಕನನ್ನು ಕಾಂಗ್ರೆಸ್ ಹಾನಗಲ್ ಕ್ಷೇತ್ರದ ಜನರ ಮಡಿಲಿಗೆ ಹಾಕಿದೆ. ಕಳೆದ ಮೂರುವರೆ ವರ್ಷಗಳಲ್ಲಿ ತಮ್ಮ ನಾಯಕತ್ವ ಸಾಬೀತು ಪಡಿಸುವಲ್ಲಿ ಮಾನೆ ಯಶಸ್ವಿಯಾಗಿದ್ದಾರೆ. ಕ್ಷೇತ್ರದ
ಜನರನ್ನು ರಕ್ಷಿಸಿದ್ದಾರೆ. ಸರ್ಕಾರ ಮಾಡಬೇಕಿದ್ದ ಕೆಲಸಗಳನ್ನು ಮಾಡಿ ಸೈ ಎನಿಸಿಕೊಂಡಿದ್ದು, ಕ್ಷೇತ್ರದ ತುಂಬೆಲ್ಲ ಅವರ ಬಗೆಗೆ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.