ADVERTISEMENT

ಹಂಸಭಾವಿ: ಹಸುವಿಗೆ ನೀರು ಕುಡಿಸಲು ಹೋಗಿ ನೀರಲ್ಲಿ ಮುಳುಗಿ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 5 ಜನವರಿ 2021, 8:30 IST
Last Updated 5 ಜನವರಿ 2021, 8:30 IST
ಮೃತ ಬಾಲಕ ಪ್ರಮೋದ ಕಲ್ಲನಗೌಡ ಪಾಟೀಲ
ಮೃತ ಬಾಲಕ ಪ್ರಮೋದ ಕಲ್ಲನಗೌಡ ಪಾಟೀಲ   

ಹಂಸಭಾವಿ: ಇಲ್ಲಿನ ದುರ್ಗಾದೇವಿ ಕೆರೆಯಲ್ಲಿ ಹಸುವಿಗೆ ನೀರು ಕುಡಿಸಲು ಹೋದ ಬಾಲಕ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ.

ಪ್ರಮೋದ ಕಲ್ಲನಗೌಡ ಪಾಟೀಲ(11) ಮೃತ ಬಾಲಕ. ಹಸು ಮೇಯಿಸಲು ಹೋದ ಬಾಲಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಮನೆಯವರು ಆತಂಕಗೊಂಡು ದೂರು ನೀಡಿದ್ದಾರೆ.

ಕೆರೆಯಲ್ಲಿ ಮುಳುಗಿರುವ ಶಂಕೆಯಿಂದ ಮಂಗಳವಾರ ಪೊಲೀಸ್ ಹಾಗೂ ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ಗ್ರಾಮಸ್ಥರು ಹುಡುಕಿ ಶವವನ್ನು ಹೊರ ತೆಗೆದಿದ್ದಾರೆ.

ADVERTISEMENT

ಈ ಕುರಿತು ಹಂಸಭಾವಿಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ಜಯಪ್ಪ ನಾಯಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.