ADVERTISEMENT

ಬಸ್‌ ಹರಿದು ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 13:51 IST
Last Updated 21 ಡಿಸೆಂಬರ್ 2019, 13:51 IST

ಹಾವೇರಿ: ನಗರದ ಕೇಂದ್ರೀಯ ಬಸ್‌ ನಿಲ್ದಾಣದ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್‌ ಹರಿದು ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಾನಗಲ್‌ ತಾಲ್ಲೂಕಿನ ಉಪ್ಪಣಸಿ ಗ್ರಾಮದದುರ್ಗಮ್ಮ ಫಕ್ಕೀರಪ್ಪ ಸಾವಕ್ಕನವರ (68) ಮೃತಪಟ್ಟವರು. ರಸ್ತೆ ದಾಟುವಾಗ ಹಾನಗಲ್‌ ಕಡೆಯಿಂದ ವೇಗವಾಗಿ ಬಂದ ಬಸ್‌ ದುರ್ಗಮ್ಮ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT